ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 DECEMBER 2023
SHIMOGA : ಹಿಜಾಬ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ವಿರುದ್ಧ ಹರಿಹಾಯ್ದರು
ಮಿನಿಸ್ಟರ್ ಹೇಳಿಕೆ, ಇಲ್ಲಿದೆ 4 ಪಾಯಿಂಟ್
ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಹಿಜಾಬ್ ನಿಷೇಧ, ಪಠ್ಯ ಪುಸ್ತಕ ಪರಿಷ್ಕರಣೆ ಕೈ ಹಾಕಿದರು. ಆ ಸಂದರ್ಭದಲ್ಲೆ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆಯಾ ಧರ್ಮದ ಪದ್ಧತಿಗಳ ಪಾಲನೆಗೆ ಅಡ್ಡಿ ಉಂಟು ಮಾಡಬಾರದು ಎಂದಿದ್ದರು. ಈಗ ಕಾರ್ಯಕ್ರಮ ಒಂದರಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ನಿಷೇಧ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ. ಬಿಜೆಪಿಯವರು ಇಂತಹ ವಿಷಯಗಳನ್ನು ಮಾತ್ರ ಆಯ್ಕೆ ಮಾಡುತ್ತಾರೆ. ಪರೇಶ್ ಮೇಸ್ತಾ ವಿಚಾರದಲ್ಲಿ ಕೈ ಹಾಕಿದ್ದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಪುನಃ ಗಲಭೆಗೆ ಮುಂದಾಗಿದ್ದರು.
ನಮ್ಮ ದೇಶ ಗಲಭೆಯ ಕಾರಣಕ್ಕೆ ಪ್ರಸಿದ್ಧವಾಗಿಲ್ಲ. ವೈವಿಧ್ಯತೆಯ ಕಾರಣಕ್ಕೆ ಮನ್ನಣೆ ಗಳಿಸಿದೆ. ಶಾಲೆಯಲ್ಲಿ ಮಕ್ಕಳು ಸಮಾನವಾಗಿರುಬೇಕು. ಇದು ಸೂಕ್ಷ್ಮ ವಿಷಯ ಅನ್ನುತ್ತಾರೆ. ಹಾಗೆಯೇ ಅವರವರ ಧರ್ಮದ ಪದ್ಧತಿಗು ಮನ್ನಣೆ ನೀಡಬೇಕಿದೆ. ಹಿಜಾಬ್ ಕುರಿತು ಎಸ್ಡಿಎಂಸಿ ಅವರು ತೀರ್ಮಾನ ಕೈಗೊಳ್ಳಬಹುದು ಎಂದು ನ್ಯಾಯಾಲಯ ಆದೇಶಿಸಿತ್ತು.
ಬಿಜೆಪಿಯವರು ಬರ ಅಧ್ಯಯನ ನಡೆಸಿದರು. ಅದರ ವರದಿ ಎಲ್ಲಿದೆ. ಮೊದಲು ಅದನ್ನು ಕೇಂದ್ರಕ್ಕೆ ತಲುಪಿಸಲಿ. ರಾಜ್ಯದಿಂದ ಕೇಂದ್ರಕ್ಕೆ 4 ಲಕ್ಷ ರೂ. ತೆರಿಗೆ ಪಾವತಿ ಆಗುತ್ತಿದೆ. ಆದರೆ ಕಡಿಮೆ ಪಾಲು ಬರುತ್ತಿದೆ. ಇಂತಹ ವಿಷಯಗಳನ್ನು ಬಿಜೆಪಿ ಪ್ರಸ್ತಾಪಿಸಲಿ.
ಹಿಜಾಬ್ ನಿಷೇಧ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಮಾಲೋಚಿಸಲಿದ್ದಾರೆ. ಕಾನೂನು ಇಲಾಖೆ ಅಧಿಕಾರಿಗಳು ಕೂಡ ಪರಿಶೀಲಿಸಲಿದ್ದಾರೆ. ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ.
ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ವಿಜಯ ಕುಮಾರ್, ಕಲಗೋಡು ರತ್ನಾಕರ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ತುಘಲಕ್ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















