SHIMOGA NEWS, 15 SEPTEMBER 2024 : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.15 ಮತ್ತು 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ಸೆ.15ರಂದು ಬೆಳಗ್ಗೆ 8.50ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 9.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11.30ಕ್ಕೆ ಸೊರಬದ ರಂಗಮಂದಿರದಲ್ಲಿ ತಾಲೂಕಿನ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸೊರಬದ ಹೊಸಬಾಳೆಯಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಮೃತ ಮಹೋತ್ಸವ ಕಾಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.16ರಂದು ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿರಾಳಕೊಪ್ಪ ಪಟ್ಟಣದಲ್ಲಿ 50 ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ » ಬೈಕ್ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






