ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೂರು ದಿನ ಸೊರಬ ಮತ್ತು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮ ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.
ಜೂ.27 ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸೊರಬ ತಲುಪಲಿದ್ದಾರೆ. ಬೆಳಗ್ಗೆ 10.30ಕ್ಕೆ ಸೊರಬದ ನಿಸರಾಣಿ ಸರ್ಕಲ್ನಲ್ಲಿ ಸಾಗರದಿಂದ ನಿಸರಾಣಿ ಮಾರ್ಗದ ಕೆಎಸ್ಆರ್ಟಿಸಿ ಬಸ್ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ತಲಕಾಲಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಧ್ಯಾಹ್ನ 12.30ಕ್ಕೆ ದೂಗೂರು ಸರ್ಕಾರಿ ಪ್ರೌಢಶಾಲೆಗಳ ವಿವೇಕಾ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೊರಬ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದಲ್ಲಿ ಸಚಿವರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜೂ.28ರಂದು ಬೆಳಗ್ಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಜೂ.29ರಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ – KSRTC ಬಸ್ಸಿನಲ್ಲಿ ಬಾಯಾರಿಕೆ ಅಂತಾ ಮೇಲೆ ನೋಡಿದ ಯುವತಿಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






