ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಆಧರಿಸಿ ಪಿಎಸ್ಐ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂಬ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ತಡೆಯಲು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ನಡೆಸುತ್ತಿರುವಾಗ ಸೋನಿಯಾಗಾಂಧಿ ನೀಡಿರುವ ಹೇಳಿಕೆ ದೇಶದ ಪ್ರತಿಯೊಬ್ಬರಿಗೂ ನೋವು ತಂದಿದೆ. ದೂರು ದಾಖಲಾದ ಕೂಡಲೇ ಎಫ್ ಐಆರ್ ದಾಖಲಿಸಬೇಕು ಎಂದಿಲ್ಲ. ಆದರೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸದಿದ್ದರೆ ತನ್ನ ಮೇಲೆಯೇ ಕ್ರಮ ಜರುಗಿಸುತ್ತಾರೆನೋ ಎಂಬ ಭಯದಲ್ಲಿ ಎಫ್ ಐಆರ್ ದಾಖಲಿಸಿರಬಹುದು ಎಂದರು.

ಸೋನಿಯಾ ಗಾಂಧಿ ಜನರ ಕ್ಷಮೆ ಕೇಳಬೇಕು ಎಂದು ನಾನು ಹೇಳುತ್ತಿಲ್ಲ. ಹಾಗೆಯೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂದೂ ನಾನು ಹೇಳುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















