SHIMOGA | ಇದೇ ತಿಂಗಳು ಕೊನೆ, ಶಿವಮೊಗ್ಗ ಸಿಟಿಯ ರಸ್ತೆಗಳಲ್ಲಿನ ಗುಂಡಿಗಳು ಮುಚ್ಚಬೇಕು, ಅಧಿಕಾರಿಗಳ ವಿರುದ್ಧ ಮಿನಿಸ್ಟರ್ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019

ಶಿವಮೊಗ್ಗ ನಗರದ ಎಲ್ಲ ಕಡೆಯೂ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚೋಕೆ ಆಗಲ್ಲ ಎಂದರೆ ಮಹಾನಗರ ಪಾಲಿಕೆಗೆ ಏನು ಅರ್ಥವಿದೆ. ಈ ತಿಂಗಳ ಅಂತ್ಯದೊಳಗೆ ಎಲ್ಲ ರಸ್ತೆಗಳ ಗುಂಡಿಗಳನ್ನೂ ಮುಚ್ಚಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

79363355 991472451214175 2411413318234275840 n.jpg? nc cat=102& nc ohc=CNciNj90x98AQmaXa vz1qLqtIjdI7y86v6yA4S3qB1KzhBlfiTGNFI4Q& nc ht=scontent.fixe1 1

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ, ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಎಷ್ಟು ತಿಂಗಳು ಬೇಕು? ಈ ಹಿಂದೆ ಅನುದಾನ ಇಲ್ಲ ಎನ್ನುತ್ತಿದ್ದೀರಿ. ಈಗ ಅನುದಾನ ನೀಡಿದರೆ ಕೆಲಸ ಮಾಡಲು ಸಮಸ್ಯೆಯೇನು ಎಂದು ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹಾಗೂ ಸ್ಮಾರ್ಟ್‌ಸಿಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸುಮ್ಮನೆ ಸಭೆ ನಡೆಸುವುದರಲ್ಲಿ ಅರ್ಥವಿಲ್ಲ. ರಸ್ತೆಗಳ ಗುಂಡಿ ಮುಚ್ಚಲು ಹಿಂದಿನ ಸಭೆಗಳಲ್ಲೇ ಸೂಚಿಸಿದ್ದೆ. ಎಷ್ಟು ರಸ್ತೆಗಳ ಗುಂಡಿ ಮುಚ್ಚಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಉತ್ತರ ನೀಡಲು ತಡಬಡಾಯಿಸಿದ ಅಧಿಕಾರಿಗಳ ವಿರುದ್ಧ ಈಶ್ವರಪ್ಪ ಆಕ್ರೋಶ ಹೊರಹಾಕಿ ತಿಂಗಳ ಅಂತ್ಯದ ಗಡುವು ನೀಡಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

District In-charge minister K S Eshwarappa has urged the officials to close all the pot holes in a month. Shimoga City has witnessed major pot holes.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2019

Leave a Comment