ರಾಗಿಗುಡ್ಡ ESI ಆಸ್ಪತ್ರೆಗೆ ಕೇಂದ್ರ ಸಚಿವೆ ಭೇಟಿ, ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಹಾಕುವ ಎಚ್ಚರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ರಾಗಿಗುಡ್ಡದಲ್ಲಿ ನಿರ್ಮಾಣ ಹಂತದಲ್ಲಿರುವ 100 ಹಾಸಿಗೆಯ ಸೂಪರ್‌ ಸ್ಪೆಷಾಲಿಟಿ ಇಎಸ್‌ಐ ಆಸ್ಪತ್ರೆಗೆ (ESI Hospital) ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ವಿಳಂಬ ಆಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ಸಚಿವರು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಬ್ಲಾಕ್‌ ಲಿಸ್ಟ್‌ಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್‌

ಶಿವಮೊಗ್ಗದಲ್ಲಿ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ 2020ರಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿ ಆರಂಭಿಸುವಾಗ ಬಂಡೆ ಅಡ್ಡಿಯಾಗಿತ್ತು. ಅದನ್ನು ಒಡೆದು ತೆರವು ಮಾಡಲು ಅನುಮತಿ ತಡವಾಯಿತು ಎಂದು ಗುತ್ತಿಗೆದಾರರು ತಿಳಿಸಿದರು. ಇದರಿಂದ ಗರಂ ಆದ ಸಚಿವೆ ಶೋಭಾ ಕರಂದ್ಲಾಜೆ, ‘ಸಂಸದರಿಗೆ ತಿಳಿಸಿದ್ದರೆ ಅನುಮತಿ ಕೊಡಿಸುತ್ತಿರಲಿಲ್ಲವೆ. ಇನ್ನು ಆರು ತಿಂಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು. ಇಲ್ಲವಾದಲ್ಲಿ ಬ್ಲಾಕ್‌ ಲಿಸ್ಟ್‌ಗೆ ಹಾಕಿ, ದೇಶಾದ್ಯಂತ ಎಲ್ಲಿಯು ಕಾಮಗಾರಿ ಸಿಗದಂತೆ ಮಾಡಲಾಗುತ್ತದೆʼ ಎಂದು ಎಚ್ಚರಿಸಿದರು.

ಕಟ್ಟಡ ವೀಕ್ಷಿಸಿದ ಮಿನಿಸ್ಟರ್‌

ಇನ್ನು ಕಟ್ಟಡವನ್ನು ವೀಕ್ಷಿಸಿದ ಸಚಿವೆ ಶೋಭಾ ಕರಂದ್ಲಾಜೆ ಕಾಮಗಾರಿಯ ಕುರಿತು ಮಾಹಿತಿ ಪಡೆದರು. ಎಲ್ಲೆಲ್ಲಿ ಏನೆಲ್ಲ ಕೆಲಸ ನಡೆಯುತ್ತಿದೆ ಎಂದು ಪ್ರಶ್ನಿಸಿ ತಿಳಿದುಕೊಂಡರು.

Central-Minister-Shobha-Karandlaje-visit-Shimoga-ESI-Hospital-construction-site
ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಮಿನಿಸ್ಟರ್‌ ಏನೆಲ್ಲ ಹೇಳಿದರು?

Point 1 F1F1F1ಕಾಮಗಾರಿ ಪರಿಶೀಲನೆ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಕಾರ್ಮಿಕ ಯೋಜನೆಗಳ ಕುರಿತು ಮಾತನಾಡಿದೆ. ಇಲ್ಲಿದೆ ಅವರ ಭಾಷಣದ ಹೈಲೈಟ್‌ ಪಾಯಿಂಟ್ಸ್‌

Point 2 F1F1F1‘ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಬೇರೆ ರಾಜ್ಯದವರಿಗೆ ಟೆಂಡರ್‌ ಆಗಿದೆ. ಅವರಿಗೆ ಇಲ್ಲಿನ ಭೂ ಪ್ರದೇಶದ ಬಗ್ಗೆ ಅರಿವಿಲ್ಲ. ಬಂಡೆ ಅಡ್ಡಿಯಾಗಿದ್ದು ಬ್ಲಾಸ್ಟಿಂಗ್‌ಗೆ ಅನುಮತಿ ತಡವಾಗಿದ್ದರಿಂದ ಕಾಮಗಾರಿ ತಡವಾಗಿದೆ.’

Point 3 F1F1F1‘ಹೆಚ್ಚುವರಿ ಕಾರ್ಮಿಕರನ್ನು ಬಳಸಿಕೊಂಡು 2026ರ ಮಾರ್ಚ್‌ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಪ್ರತಿ 15 ದಿನಕ್ಕೊಮ್ಮೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾಮಗಾರಿಯ ವರದಿ ಪಡೆಯಬೇಕು.ʼ

Point 4 F1F1F1‘ಇಲ್ಲಿ 70 ಸಾವಿರ ಐಪಿಗಳಿದ್ದಾರೆ. ಕೆಲವು ಸಂಸ್ಥೆಗಳಲ್ಲಿ ಇಎಸ್‌ಐ, ಪಿಎಫ್‌ ನೀಡಬೇಕು ಎಂಬ ಕಾರಣಕ್ಕೆ ಕಾರ್ಮಿಕರ ಸಂಖ್ಯೆಯನ್ನೆ ಕಡಿಮೆ ತೋರಿಸಲಾಗುತ್ತಿದೆ. ಇದರಿಂದ ಕಾರ್ಮಿಕರಿಗೆ ತೀವ್ರ ನಷ್ಟವಾಗಲಿದೆ. ಕಾರ್ಮಿಕ ಕಾನೂನುಗಳನ್ನು ಸರಳೀಕರಣ ಮಾಡಲಾಗುತ್ತಿದೆ.ʼ

Point 5 F1F1F1‘ಕಾರ್ಮಿಕರು ಚಿಕಿತ್ಸೆಗೆ ಇಎಸ್‌ಐ ಆಸ್ಪತ್ರೆಗೆ ಹೋಗಬೇಕು ಎಂದೇನಿಲ್ಲ. ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದೆ ಅವಕಾಶ ಕಲ್ಪಿಸುವ ಯೋಚನೆ ಇದೆ.ʼ

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಎಸ್‌.ರುದ್ರೇಗೌಡ ಸೇರಿದಂತೆ ಹಲವರು ಇದ್ದರು.

Central-Minister-Shobha-Karandlaje-visit-Shimoga-ESI-Hospital-construction-site
ಇಎಸ್‌ಐ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ.
Central-Minister-Shobha-Karandlaje-visit-Shimoga-ESI-Hospital-construction-site
ಇಎಸ್‌ಐ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ.
Central-Minister-Shobha-Karandlaje-visit-Shimoga-ESI-Hospital-construction-site
ಇಎಸ್‌ಐ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ನೀಲನಕ್ಷೆ.
Central-Minister-Shobha-Karandlaje-visit-Shimoga-ESI-Hospital-construction-site
ಇಎಸ್‌ಐ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ನೀಲನಕ್ಷೆ.
Central-Minister-Shobha-Karandlaje-visit-Shimoga-ESI-Hospital-construction-site
ನಿರ್ಮಾಣ ಹಂತದಲ್ಲಿರುವ ಇಎಸ್‌ಐ ಆಸ್ಪತ್ರೆ.
Central-Minister-Shobha-Karandlaje-visit-Shimoga-ESI-Hospital-construction-site
ನಿರ್ಮಾಣ ಹಂತದಲ್ಲಿರುವ ಇಎಸ್‌ಐ ಆಸ್ಪತ್ರೆ.
Central-Minister-Shobha-Karandlaje-visit-Shimoga-ESI-Hospital-construction-site
ನಿರ್ಮಾಣ ಹಂತದಲ್ಲಿರುವ ಇಎಸ್‌ಐ ಆಸ್ಪತ್ರೆ.

ಇದನ್ನೂ ಓದಿ » ಶಿವಮೊಗ್ಗದ ಮಾಚೇನಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಶೀಘ್ರ ಕ್ಲಸ್ಟರ್‌ ಸ್ಥಾಪನೆಯ ಘೋಷಣೆ

JNNCE-Admission-Advt-scaled

ESI Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment