SHIVAMOGGA LIVE NEWS | 7 JANUARY 2024
SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್ಗೆ ಭೇಟಿ ನೀಡಿದ್ದರು.
ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಸಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಕಾಲೇಜು ಪ್ರಾಚಾರ್ಯರಿಗೆ ಸೂಚನೆ
ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನೆರವಾಗಿ ಎಂದು ಜಿಲ್ಲೆಯ ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್ ರದ್ದು, ಟರ್ಮಿನಲ್ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200