SHIMOGA, 31 JULY 2024 : ಭಾರಿ ಮಳೆ ಮುನ್ಸೂಚನೆ ಮಧ್ಯೆ ಶಿವಮೊಗ್ಗ ನಗರದಲ್ಲಿ ಬಿಸಿಲು ಪ್ರತ್ಯಕ್ಷವಾಗಿದೆ. ಇನ್ನೊಂದೆಡೆ ನೆರೆ ಭೀತಿ ಹಿನ್ನೆಲೆ ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಆಯುಕ್ತರು ಪ್ರತ್ಯೇಕವಾಗಿ ಸಿಟಿ ರೌಂಡ್ಸ್ (ROUNDS) ನಡೆಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಸಿಟಿಯಲ್ಲಿ ಬಿಸಿಲು
ನಿರಂತರ ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಕಳೆದ ಎರಡು ವಾರದಿಂದ ಬಿಸಿಲು ಮರೆಯಾಗಿತ್ತು. ಇವತ್ತು ಬೆಳಗೆಯಿಂದ ಆಗಸಲ್ಲಿ ಮೋಡಗಳು ಮರೆಯಾಗಿವೆ. ಪುನಃ ಬಿಸಲು ಕಾಣಿಸಿಕೊಂಡಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ. ಮುಗ್ಗುಲು ಹಿಡಿದ ಬಟ್ಟೆಗಳನ್ನು ಒಣಗಿಸುತ್ತಿದ್ದಾರೆ.

ರಾತ್ರಿ ರೌಂಡ್ಸ್ ಮಾಡಿದ ಎಂಎಲ್ಎ
ತುಂಗಾ ನದಿಯಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸುವ ಸಾಧ್ಯತೆ ಹಿನ್ನೆಲೆ ನಗರದಲ್ಲಿ ನೆರೆ ಭೀತಿ ಉಂಟಾಗಿತ್ತು. ಹಾಗಾಗಿ ವಿವಿಧ ಬಡಾವಣೆಗೆ ತೆರಳಿ ಪರಿಶೀಲನೆ ನಡೆಸಿದರು. ಇನ್ನು, ಶಿವಮೊಗ್ಗ ಪಂಪ್ ಹೌಸ್ ಮತ್ತು ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು.

ಕಮಿಷನರ್ ಸಿಟಿ ರೌಂಡ್ಸ್
ಇನ್ನೊಂದೆಡೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಗಾ ನದಿ ತೀರದಲ್ಲಿರುವ ಬಡಾವಣೆಗಳಿಗೆ ಕಮಿಷನರ್ ಕವಿತಾ ಯೋಗಪ್ಪನವರ್ ರಾತ್ರಿ ತೆರಳಿ, ಪರಿಶೀಲಿಸಿದರು. ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ವಿವಿಧೆಡೆಗೆ ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸೀಗೆಹಟ್ಟಿಯ ಐದು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅವರಿಗೆ ಕಾಳಾಜಿ ಕೇಂದ್ರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ ⇓
ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






