ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 31 JULY 2024 : ಭಾರಿ ಮಳೆ ಮುನ್ಸೂಚನೆ ಮಧ್ಯೆ ಶಿವಮೊಗ್ಗ ನಗರದಲ್ಲಿ ಬಿಸಿಲು ಪ್ರತ್ಯಕ್ಷವಾಗಿದೆ. ಇನ್ನೊಂದೆಡೆ ನೆರೆ ಭೀತಿ ಹಿನ್ನೆಲೆ ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಆಯುಕ್ತರು ಪ್ರತ್ಯೇಕವಾಗಿ ಸಿಟಿ ರೌಂಡ್ಸ್ (ROUNDS) ನಡೆಸಿದರು.
ಶಿವಮೊಗ್ಗ ಸಿಟಿಯಲ್ಲಿ ಬಿಸಿಲು
ನಿರಂತರ ಮಳೆ ಮತ್ತು ಮೋಡ ಕವಿದ ವಾತಾವರಣದಿಂದ ಕಳೆದ ಎರಡು ವಾರದಿಂದ ಬಿಸಿಲು ಮರೆಯಾಗಿತ್ತು. ಇವತ್ತು ಬೆಳಗೆಯಿಂದ ಆಗಸಲ್ಲಿ ಮೋಡಗಳು ಮರೆಯಾಗಿವೆ. ಪುನಃ ಬಿಸಲು ಕಾಣಿಸಿಕೊಂಡಿದ್ದು ಜನರು ನಿಟ್ಟುಸಿರು ಬಿಡುವಂತಾಗಿದೆ. ಮುಗ್ಗುಲು ಹಿಡಿದ ಬಟ್ಟೆಗಳನ್ನು ಒಣಗಿಸುತ್ತಿದ್ದಾರೆ.

ರಾತ್ರಿ ರೌಂಡ್ಸ್ ಮಾಡಿದ ಎಂಎಲ್ಎ
ತುಂಗಾ ನದಿಯಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸುವ ಸಾಧ್ಯತೆ ಹಿನ್ನೆಲೆ ನಗರದಲ್ಲಿ ನೆರೆ ಭೀತಿ ಉಂಟಾಗಿತ್ತು. ಹಾಗಾಗಿ ವಿವಿಧ ಬಡಾವಣೆಗೆ ತೆರಳಿ ಪರಿಶೀಲನೆ ನಡೆಸಿದರು. ಇನ್ನು, ಶಿವಮೊಗ್ಗ ಪಂಪ್ ಹೌಸ್ ಮತ್ತು ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು.

ಕಮಿಷನರ್ ಸಿಟಿ ರೌಂಡ್ಸ್
ಇನ್ನೊಂದೆಡೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಗಾ ನದಿ ತೀರದಲ್ಲಿರುವ ಬಡಾವಣೆಗಳಿಗೆ ಕಮಿಷನರ್ ಕವಿತಾ ಯೋಗಪ್ಪನವರ್ ರಾತ್ರಿ ತೆರಳಿ, ಪರಿಶೀಲಿಸಿದರು. ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ವಿವಿಧೆಡೆಗೆ ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸೀಗೆಹಟ್ಟಿಯ ಐದು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅವರಿಗೆ ಕಾಳಾಜಿ ಕೇಂದ್ರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ ⇓
ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






