ಅನುಮಾನಾಸ್ಪದ ಬಾಕ್ಸ್‌, ರಾತ್ರಿ ಪೂರ್ತಿ ಸ್ಥಳದಲ್ಲೆ MLA ಮೊಕ್ಕಾಂ, ಕಾರ್ಯಾಚರಣೆ ಬಗ್ಗೆ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 NOVEMBER 2023

SHIMOGA : ಅನುಮಾನಾಸ್ಪದ ಬಾಕ್ಸ್‌ (BOX) ಪತ್ತೆಯಿಂದ ಹಿನ್ನೆಲೆ ಬಾಂಬ್‌ ನಿಷ್ಕ್ರಿಯ ದಳ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆ ಹಿನ್ನೆಲೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಸ್ಥಳದಲ್ಲಿ ಬೀಡು ಬಿಟ್ಟಿದ್ದರು.

ರಾತ್ರಿ ಕಾರ್ಯಾಚರಣೆ ಆರಂಭವಾದ ಹೊತ್ತಿಗೆ ಶಾಸಕ ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದರು. ಬೆಳಗಿನ ಜಾವ 4.30ರ ಹೊತ್ತಿಗೆ ಕಾರ್ಯಾಚರಣೆ ಅಂತ್ಯವಾಗುವವರೆಗೆ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಕಾರ್ಯಾಚರಣೆ ಸಂದರ್ಭ ಪೊಲೀಸ್‌ ಅಧಿಕಾರಿಗಳು, ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳ ಜೊತೆಗೆ ಆಗಾಗ ಚರ್ಚೆ ನಡೆಸಿದರು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಅನುಮಾನಾಸ್ಪದ ಬಾಕ್ಸ್‌ ಪತ್ತೆ, ಇಡೀ ರಾತ್ರಿ ಹೇಗಿತ್ತು ಕಾರ್ಯಾಚರಣೆ? ಇಲ್ಲಿದೆ ಟೈಮ್‌ ಟೂ ಟೈಮ್‌ ಡಿಟೇಲ್ಸ್‌

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಅನುಮಾನಾಸ್ಪದ ಬಾಕ್ಸ್‌ಗಳನ್ನು ತೆರೆದು ತಜ್ಞರು ಪರಿಶೀಲನೆ ನಡೆಸಿದರು. ಈ ಸಂದರ್ಭ ಹಿರಿಯ ಅಧಿಕಾರಿಗಳ ಜೊತೆಗೆ ಶಾಸಕ ಚನ್ನಬಸಪ್ಪ ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಾಕ್ಸ್‌ ಒಳಗಿದ್ದ ವಸ್ತುಗಳ ಕುರಿತು ಮಾಹಿತಿ ಪಡೆದರು.

ಮುಖಕ್ಕೆ ಹಚ್ಚುವ ಪೌಡರ್‌ ಅಲ್ಲ

ಇದೇ ವೇಳೆ ಮಾಧ್ಯಮಗಳ ಜೊತೆಗೆ ಶಾಸಕ ಚನ್ನಬಸಪ್ಪ ಮಾತನಾಡಿದರು. ಆಗ ಅವರು ತಿಳಿಸಿದ ಎರಡು ಪ್ರಮುಖ ಪಾಯಿಂಟ್‌ ಇಲ್ಲಿದೆ.

POINT-1-jpg.webpಪ್ರತಿ ಟ್ರಂಕ್‌ನಲ್ಲಿ ಎರಡು ಬ್ಯಾಗ್‌ಗಳಿದ್ದವು. ಗೊಬ್ಬರದ ಚೀಲದ ಮಾದರಿಯಲ್ಲಿವೆ. ಅವುಗಳಿಗೆ ನ್ಯೂಸ್‌ ಪೇಪರ್‌ ಹಾಕಿ ಪ್ಯಾಕ್‌ ಮಾಡಲಾಗಿದೆ. ಆ ಚೀಲಗಳಲ್ಲಿ ಬಿಳಿ ಬಣ್ಣದ ಪೌಡರ್‌ ಸಿಕ್ಕಿದೆ. ಅದನ್ನು ಯಾವ ಕಾರಣಕ್ಕೆ ಯಾವುದಕ್ಕೆ ಬಳಕೆ ಮಾಡುತ್ತಾರೆ ಅನ್ನುವುದ ಸಹಜವಾಗಿ ಗೊತ್ತಾಗುತ್ತದೆ. ದೇವರು ದೊಡ್ಡವನು. ಇದರ ಪರಿಣಾಮ ಯಾವಾಗ ಏನಾಗುತ್ತಿತ್ತೊ ಗೊತ್ತಿಲ್ಲ.

POINT-2-jpg.webpಬಹಳ ಎಚ್ಚರಿಕೆ ವಹಿಸಬೇಕಿದೆ ಅನಿಸುತ್ತದೆ. ಅದು ಮುಖಕ್ಕೆ ಹಚ್ಚಿಕೊಳ್ಳುವ ಪೌಡರ್‌ ಅಲ್ಲ. ಸ್ನೋ ಪೌಡರ್‌ ಅಂತು ಅಲ್ಲವೆ ಅಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸದ್ಯಕ್ಕೆ ಶಿವಮೊಗ್ಗ ನಗರ ಸುರಕ್ಷಿತವಾಗಿದೆ. ‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 6, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment