SHIMOGA, 4 SEPTEMBER 2024 : ಸ್ಮಾರ್ಟ್ ಸಿಟಿ (Smart City) ಕಚೇರಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪ್ರರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ನಾಲ್ಕು ಪಾಯಿಂಟ್ ಚರ್ಚೆ
» ಪಾಯಿಂಟ್ 1 : ಪೂರ್ಣಗೊಂಡಿರುವ ಕಾಮಗಾರಿಗಳು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಸೂಚಿಸಿದರು.
» ಪಾಯಿಂಟ್ 2 : ಖೇಲೋ ಇಂಡಿಯಾ ಯೋಜನೆ ಕೈತಪ್ಪಿದ ಬಗ್ಗೆ ಚರ್ಚೆ. ಶಿವಮೊಗ್ಗ ನಗರದಲ್ಲಿರುವ ಕನ್ಸರ್ವೆನ್ಸಿ ರಸ್ತೆಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು. ಸಮರ್ಪಕವಾಗಿ ಅಭಿವೃದ್ಧಿಗೆ ಸೂಚನೆ.
» ಪಾಯಿಂಟ್ 3 : ಗಾಂಧಿಪಾರ್ಕ್ ನಿಧಾನಗತಿಯ ಕಾಮಗಾರಿಗಳ ಕುರಿತು ಮಾಹಿತಿ ಪಡೆದುರ. ಶೀಘ್ರ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಸೂಚಿನೆ.
» ಪಾಯಿಂಟ್ 4 : ಯುಜಿ ವಿದ್ಯುತ್ ಸೊರಬರಾಜಿನಲ್ಲಿ ಆಗುತ್ತಿರುವ ಅವಘಡಗಳ ಕುರಿತಂತೆ ಮುಂಜಾಗ್ರತ ಕ್ರಮ ವಹಿಸುವಂತೆ ಆದೇಶಿಸಿದರು.
ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ » ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200