IPL ಟಿಕೆಟ್‌ ವಿಚಾರ, ಸಭಾಧ್ಯಕ್ಷರಿಗೆ ಪತ್ರ ಬರೆದ ಶಿವಮೊಗ್ಗ MLA, ಏನಿದೆ ಪತ್ರದಲ್ಲಿ?

Published On : ಏಪ್ರಿಲ್ 8, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: IPLಟಿಕೆಟ್‌ ನಿರಾಕರಿಸಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರು ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಕಳೆದ ವರ್ಷ IPL ಪಂದ್ಯದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

MLA-SN-Channabasappa-Shimoga.

ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ನಿರಾಕರಿಸುತ್ತೇನೆ. ಮುಂಬರುವ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ಗಳನ್ನು ವಿತರಿಸಬಾರದು ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 8, 2026

Leave a Comment