ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ದಾಮೋದರ ಬಡಾವಣೆ ಮತ್ತು ಇಸ್ಲಾಪುರ ಬಡಾವಣೆಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ (Visit) ನೀಡಿದ್ದರು. ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜೈಲಿನಿಂದ ಕೋರ್ಟ್ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್, ಸಿಕ್ಕಿದ್ದೇನು?
ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆಯಿದೆ ಎಂದು ಸಾರ್ವಜನಿಕರು ದೂರಿದರು. ಈ ಸಂದರ್ಭ ಆಕ್ರೋಶಗೊಂಡ ಶಾಸಕ ಚನ್ನಬಸಪ್ಪ, ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಆರೋಗ್ಯ ಕೇಂದ್ರಕ್ಕೆ ಭೇಟಿ
ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಲಭ್ಯ ಕೊರತೆ, ಸಿಬ್ಬಂದಿ ಲಭ್ಯತೆ ಮತ್ತು ಸೇವಾ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು. ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗು ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು. ಬಿಸಿ ಊಟದ ಸಮಸ್ಯೆ ಕುರಿತು ಸಿಬ್ಬಂದಿ ಜೊತೆ ಚರ್ಚಿಸಿದರು. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಕುರಿತು ಮಾಹಿತಿ ಪಡೆದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





