‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜನವರಿ 2022

ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರೊಂದಿಗೆ ಸಂವಾದ ಆಯೋಜಿಸಲಾಗಿತ್ತು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸಂವಾದದಲ್ಲಿ ಡಿ.ಎಸ್.ಅರಣ್ ಹೇಳಿದ ಟಾಪ್ 10 ಸಂಗತಿಗಳಿವು

ಸಿಕ್ಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು‌. ನಿಗಮದ ಅಧ್ಯಕ್ಷರ ಸ್ಥಾನ ನೀಡಿದಾಗ ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿದವರಿದ್ದಾರೆ. ಆದರೆ ನಿಗಮದ ಜವಾಬ್ದಾರಿಯನ್ನು ಚನ್ನಾಗಿ ನಿಭಾಯಿಸಿದ ಕಾರಣಕ್ಕೆ ಟಿಕೆಟ್ ಸಿಕ್ಕಿದೆ.

ಯಡಿಯೂರಪ್ಪ ಅವರು ಬಂದಿದ್ದರಿಂದ ಚುನಾವಣಾ ಕಣ ಟೇಕಾಫ್ ಆಯ್ತು. ಐದು ಕ್ಲಸ್ಟರ್ ಮಾಡಿಕೊಂಡು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾದೆವು. ಮೊದಲೆರಡು ಭಾರಿ ನನ್ನ ವಿಚಾರಗಳನ್ನು ತಿಳಿಸಿದೆ. ಮೂರನೆ ಭೇಟಿ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು ನನ್ನ ಜೊತೆಗೆ ಫೋಟೊ ತೆಗೆಸಿಕೊಳ್ಳಲು ಆರಂಭಿಸಿದರು. ಇದು ಗೆಲುವಿನ ವಿಶ್ವಾಸ ಮೂಡಿಸಿತು.

ಚುನಾವಣೆ ಅಂದರೆ ಜಾತಿ ಲೆಕ್ಕಾಚಾರ ಆರಂಭವಾಗುತ್ತದೆ. ಆದರೆ ಈ ಚುನಾವಣೆಯಲ್ಲಿ ನಮ್ಮ ಸಮುದಾಯದ ಮತದಾರರ ಸಂಖ್ಯೆ ಕೇವಲ ಎರಡು. ಆದರೂ ಮತದಾರರು ಜಾತಿಗೆ ಪ್ರಾಧಾನ್ಯ ನೀಡದೆ ಗೆಲವು ನೀಡಿದ್ದಾರೆ.

180 ಮಂದಿ 20 ಮನೆಗೆ ಹೋಗದೆ ಕೆಲಸ ಮಾಡಿದ್ದರು. ನಾನು ಒಂದು ಕಡೆ ಹೋಗಿ ಪ್ರಚಾರ ಮಾಡಿ ಬಂದ ಬಳಿಕ ಪ್ರತಿಕ್ರಿಯೆ ಪಡೆಯುತ್ತಿದ್ದರು. ತಪ್ಪುಗಳೇನು, ತಿದ್ದಿಕೊಳ್ಳಬೇಕಾ ಎಂದು ಪರಿಶೀಲಿಸುತ್ತಿದ್ದರು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಚುನಾವಣೆ ಸಂದರ್ಭ ನಾನು ತುಂಬಾ ತಾಳ್ಮೆಯಿಂದ ಇದ್ದೆ. ಸೋತರೆ ಇದೊಂದು ಪಾಠವಾಗಲಿದೆ. ಗೆದ್ದರೆ ನಿರೀಕ್ಷೆಗಳನ್ನು ಈಡೇರಿಸುವತ್ತ ಗಮನ ಹರಿಸುತ್ತೇನೆ ಅಂದುಕೊಂಡಿದ್ದೆ.

ಸದ್ಯ ಹಲವು ಗ್ರಾಮಗಳಲ್ಲಿ ರಸ್ತೆಗಳು ಚನ್ನಾಗಿ ಆಗಿವೆ. ಪ್ರಮುಖವಾಗಿ ಡಿಜಿಟಲಿಕರಣ ಮಾಡಬೇಕಿದೆ. ಎರಡ್ಮೂರು ಗ್ರಾಮ ಪಂಚಾಯಿತಿಗಳನ್ನು ಪ್ರಾಥಮಿಕವಾಗಿ ಡಿಜಿಟಲಿಕರಣ ಮಾಡುವತ್ತ ಯೋಚಿಸಿದ್ದೇನೆ. ಇದಕ್ಕೆ ಓಎಫ್‌ಸಿ ಕೇಬಲ್ ಅಳವಡಿಕೆ ಮಾಡುವತ್ತ ಚರ್ಚೆ ನಡೆಯುತ್ತಿದೆ. ಅಲ್ಲಿನ ಅವಶ್ಯಕತೆಗೆ ಬೇಕಿರುವುದು ಮಾಡುವತ್ತ ಕೆಲಸ ಮಾಡುತ್ತೇನೆ.

ವಿಧಾನ ಪರಿಷತ್ ಅಂದರೆ ಹಿರಿಯರ ಸದನ ಅಂತಾರೆ. ನಾನು ಅತ್ಯಂತ ಕಿರಿಯನಾಗಲಿಲ್ಲವೆ ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಕಾಕತಾಳಿಯ ಎಂಬಂತೆ ನಮ್ಮ ತಂದೆಯವರು ಕೂಡ ಇದೆ ವಯಸ್ಸಿಗೆ ಹೋಗಿದ್ದರು.

ಹಳ್ಳಿ ಹಳ್ಳಿಗೆ ಪ್ರವಾಸ

365 ಗ್ರಾಮ ಪಂಚಾಯತಿಗಳಿವೆ. ಜ.31 ಅಥವಾ ಫೆ.15ರ ಬಳಿಕ ಒಂದು ಪಂಚಾಯತಿಗೆ ಒಂದು ಗಂಟೆ ಭೇಟಿ ನೀಡುತ್ತೇನೆ. ಪ್ರಶ್ನಾವಳಿ ಸಿದ್ದಪಡಿಸಿಕೊಂಡು ಏನಿಲ್ಲ? ಏನು ಅಗತ್ಯವಿದೆ ಎಂಬುದರ ಕುರಿತು ಮಾಹಿತಿ ಪಡೆಯುತ್ತೇನೆ. ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ದಿನಕ್ಕೆ 12 ಗಂಟೆ ಕ್ಷೇತ್ರಕ್ಕೆ ಕೆಲಸ ಮಾಡುತ್ತೇನೆ ಅಂದಿದ್ದೆ. ಅದನ್ನು ಮಾಡುತ್ತೇನೆ.

AVvXsEiyUwzCQfNcjyPMErXWzlVTQH5K b0YH73YGB2uLxN1g uwEFGNo92TIHf9CkqwG6z LYGxD5dZVB8tnjfAbZhC6nkhI4Uirr VTcONREuyEvSTuLy CXaZtJl1SKMwBzXsT 0RgOshWzsE3FtzFBfNbqnKMuyczR8HXDJkyvhUNpGSt EgW1 oQmXfw=s926

ಜಾಗೃತಿ ಮೂಡಿಸುವ ಕಾರ್ಯವನ್ನು ಕೂಡ ಮಾಡಲಿದ್ದೇವೆ. ಯೋಜನೆಗಳೇನು, ಕೇಂದ್ರ, ರಾಜ್ಯ ಸರ್ಕಾರದ ಅನುದಾನಗಳೇನು ಎಂಬುದರ ಜಾಗೃತಿ ಮೂಡಿಸುತ್ತೇವೆ. ಫೆಬ್ರವರಿ ತಿಂಗಳಲ್ಲೆ ಈ ಕಾರ್ಯ ನಡೆಯಲಿದೆ.

ಗ್ರಾಮ ಪಂಚಾಯಿತಿಗಳಿಗೆ ನಮಗೆ ಅನುದಾನ ಕಡೆಮೆ ಇದೆ. ಸರಿಯಾದ ದಾಖಲೆಗಳನ್ನು ಸಿದ್ಧಪಡಿಸಬೇಕು. ಆ ಕೆಲಸ ಮಾಡಿದರೆ ಸರ್ಕಾರದಿಂದ ಹೆಚ್ಚು ಅನುದಾನ ಲಭಿಸಲಿದೆ. ಇದಕ್ಕಾಗಿ ಕ್ರಮ ವಹಿಸುತ್ತೇನೆ.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ, ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ ಯಡಗೆರೆ ಇದ್ದರು.

AVvXsEi3OeZ84L4K7KxRV KAdikws0r4OiK3N286Kac6Qa3rwskv5 Pen3By7 yum1A8tW8wkEsAf0Z7eTF in kDbNpukna42N3f rdqZueIHJ4DJEvTlqAhsYKC wxMk2Bb 6lC ZpG7FWfQs bvKDKFOgY1L0ssvDBzLt2u2uM1NvEzMyhaB35guTjJTgFA=s926

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment