SHIVAMOGGA LIVE NEWS | 15 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರೈಲಿನಲ್ಲಿ ಸಿಕ್ಕ ಮೊಬೈಲ್ ವಾರಸುದಾರನ ಕೈಗೆ
SHIMOGA : ರೈಲಿನಲ್ಲಿ ಸಿಕ್ಕ ಸ್ಮಾರ್ಟ್ ಫೋನ್ ಅನ್ನು ವಾರಸುದಾರರಿಗೆ ಹಿಂತಿರುಗಿಸಲಾಗಿದೆ. ಮೈಸೂರು ತಾಳಗುಪ್ಪ ರೈಲಿನಲ್ಲಿ ರೆಡ್ಮೀ ಮೊಬೈಲ್ ಪತ್ತೆಯಾಗಿತ್ತು. ರೈಲ್ವೆ ಪೊಲೀಸರು ವಾರಸುದಾರನನ್ನು ಪತ್ತೆ ಹಚ್ಚಿ ಮೊಬೈಲ್ ಹಿಂತಿರುಗಿಸಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆರ್ಪಿಎಫ್ ಪೊಲೀಸರು ಮೊಬೈಲ್ ಹಿಂತಿರುಗಿಸಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತೆ ರಕ್ಷಣೆ
SHIMOGA : ರೈಲ್ವೆ ನಿಲ್ದಾಣದಲ್ಲಿ 15 ವರ್ಷದ ಬಾಲಕಿಯನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ನಿಲ್ದಾಣದಲ್ಲಿ ಅಪ್ರಾಪ್ತೆ ಓಡಾಡುತ್ತಿರುವುದನ್ನು ಗಮನಿಸಿದ ರೈಲ್ವೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಪರೇಷನ್ ನನ್ನೆಫರಿಸ್ತೆ ಯೋಜನೆ ಅಡಿ ಅಪ್ರಾಪ್ತೆಯನ್ನು ರಕ್ಷಿಸಿ ಸುರಭಿ ಉಜ್ವಲ ಕೇಂದ್ರಕ್ಕೆ ಆಕೆಯನ್ನು ಕರೆದೊಯ್ದು ದಾಖಲಿಸಲಾಗಿದೆ.
ಇದನ್ನೂ ಓದಿ – ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್, ಕಾರಣವೇನು?
ಖಾಲಿ ಹುದ್ದೆಗೆ ನೇರ ಸಂದರ್ಶನ
SHIMOGA : ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನ.20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಸೂಕ್ತ ದಾಖಲೆ ಜೊತೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






