ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 MAY 2023
SHIMOGA : ಮೊಬೈಲ್ ಫೋನ್ನಲ್ಲಿ (Mobile Phone) ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕಳ್ಳರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್, ಚಾಕುವಿನಿಂದ ಹಲ್ಲೆ
ಸಂದೀಪ್ ಎಂಬುವವರ ರಿಯಲ್ ಮೀ 9 ಪ್ರೋ ಮೊಬೈಲ್ (Mobile Phone) ಕಳ್ಳತನವಾಗಿದೆ. ಕೆಲಸ ಮುಗಿಸಿಕೊಂಡು ಸ್ವಾಮಿ ವಿವೇಕಾನಂದ ಬಡಾವಣೆಯ ಸಿ ಬ್ಲಾಕ್ನಲ್ಲಿರುವ ಮನೆ ಕಡೆಗೆ ನಡೆದು ಹೋಗುತ್ತಿದ್ದರು. ಈ ವೇಳೆ ಸಂದೀಪ್ ಸಹೋದರನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದರು. ಆಗ ಬೈಕಿನಲ್ಲಿ ಬಂದ ಮೂವರು ಸಂದೀಪ್ ಅವರ ಮೊಬೈಲ್ ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






