ಶಿವಮೊಗ್ಗ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾದ ಕಳ್ಳರು

 ಶಿವಮೊಗ್ಗ  LIVE 

SHIVAMOGGA LIVE NEWS | 25 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೈಲ್ವೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಳ್ಳತನವಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.

ಚೇತನ್ ನಾಯ್ಕ ಎಂಬುವವರಿಗೆ ಸೇರಿದ ಮೊಬೈಲ್ ಕಳ್ಳತನವಾಗಿದೆ. ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಚೇತನ್ ನಾಯ್ಕ ಅವರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಮೊಬೈಲ್ ಫೋನ್’ನಲ್ಲಿ ಮಾತನಾಡಿಕೊಂಡು ರೈಲ್ವೆ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದರು.

ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಚೇತನ್ ನಾಯ್ಕ ಅವರ ಮೊಬೈಲ್ ಫೋನ್ ಕಸಿದುಕೊಂಡು ರೈಲ್ವೆ ನಿಲ್ದಾಣದ ಕಡೆಗೆ ವೇಗವಾಗಿ ಹೋಗಿದ್ದಾರೆ. 25 ಸಾವಿರ ಮೌಲ್ಯದ ಒನ್ ಪ್ಲಸ್ ಮೊಬೈಲ್ ಕಳುವಾಗಿದೆ.

ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Nanjappa Hospital Shimoga

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ 

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment