SHIVAMOGGA LIVE NEWS | 3 MAY 2024
ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವುದಕ್ಕೆ ತಡೆಯೊಡ್ಡುವ ಬಿಜೆಪಿಯ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂ ನ್ಯಾಯಾಲಯದಲ್ಲಿ ಭಾವಚಿತ್ರ ಬಳಕೆ ಸಂಬಂಧ ಪ್ರಕರಣದ ಮುಂದಿನ ವಿಚಾರಣೆಯು ಮೇ 27ಕ್ಕೆ ಹೋಗಿದೆ. ಇನ್ನು ಐದು ದಿನದಲ್ಲಿ ಚುನಾವಣೆಯ ಮುಗಿದು ಹೋಗುವುದರಿಂದ ಮೋದಿ ಭಾವಚಿತ್ರ ಬಳಕೆಗೆ ಈಶ್ವರಪ್ಪಗೆ ಯಾವುದೇ ಅಡೆತಡೆ ಇಲ್ಲದಂತಾಗಿದೆ.
![]() |
ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆ ಮಾಡದಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ದಾವೆ ಹೂಡಿದ್ದಾರೆ. ಅದಕ್ಕೆ ಈಶ್ವರಪ್ಪ ಅವರು ಆಕ್ಷೇಪಣೆ ಸಲ್ಲಿಸಿರುವುದಲ್ಲದೆ ದಾವೆಯನ್ನು ವಜಾಗೊಳಿಸುವಂತೆ ಸಹ ಅರ್ಜಿ ಸಲ್ಲಿಸಿದ್ದಾರೆ.
‘ಮೋದಿ ಭಾವಚಿತ್ರ ಬಳಕೆಗೆ ತಡೆಯೊಡ್ಡಬೇಕೆಂಬ ಬಿಜೆಪಿ ಅಪೇಕ್ಷೆಗೆ ನ್ಯಾಯಾಲಯದಲ್ಲಿ ಮನ್ನಣೆ ಸಿಕ್ಕಿಲ್ಲ. ಮೋದಿಯಿಂದ ನನ್ನನ್ನು ಬೇರಾಗಿಸಲು ಚುನಾವಣೆ ಅಲ್ಲದೆ ಆನಂತರವೂ ಸಾಧ್ಯವಿಲ್ಲ. ಇದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು,’ ಎಂದು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ – ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200