SHIVAMOGGA LIVE NEWS | 3 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವುದಕ್ಕೆ ತಡೆಯೊಡ್ಡುವ ಬಿಜೆಪಿಯ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂ ನ್ಯಾಯಾಲಯದಲ್ಲಿ ಭಾವಚಿತ್ರ ಬಳಕೆ ಸಂಬಂಧ ಪ್ರಕರಣದ ಮುಂದಿನ ವಿಚಾರಣೆಯು ಮೇ 27ಕ್ಕೆ ಹೋಗಿದೆ. ಇನ್ನು ಐದು ದಿನದಲ್ಲಿ ಚುನಾವಣೆಯ ಮುಗಿದು ಹೋಗುವುದರಿಂದ ಮೋದಿ ಭಾವಚಿತ್ರ ಬಳಕೆಗೆ ಈಶ್ವರಪ್ಪಗೆ ಯಾವುದೇ ಅಡೆತಡೆ ಇಲ್ಲದಂತಾಗಿದೆ.
ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆ ಮಾಡದಂತೆ ನಿರ್ದೇಶನ ನೀಡಬೇಕೆಂದು ಕೋರಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ದಾವೆ ಹೂಡಿದ್ದಾರೆ. ಅದಕ್ಕೆ ಈಶ್ವರಪ್ಪ ಅವರು ಆಕ್ಷೇಪಣೆ ಸಲ್ಲಿಸಿರುವುದಲ್ಲದೆ ದಾವೆಯನ್ನು ವಜಾಗೊಳಿಸುವಂತೆ ಸಹ ಅರ್ಜಿ ಸಲ್ಲಿಸಿದ್ದಾರೆ.
‘ಮೋದಿ ಭಾವಚಿತ್ರ ಬಳಕೆಗೆ ತಡೆಯೊಡ್ಡಬೇಕೆಂಬ ಬಿಜೆಪಿ ಅಪೇಕ್ಷೆಗೆ ನ್ಯಾಯಾಲಯದಲ್ಲಿ ಮನ್ನಣೆ ಸಿಕ್ಕಿಲ್ಲ. ಮೋದಿಯಿಂದ ನನ್ನನ್ನು ಬೇರಾಗಿಸಲು ಚುನಾವಣೆ ಅಲ್ಲದೆ ಆನಂತರವೂ ಸಾಧ್ಯವಿಲ್ಲ. ಇದನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಳ್ಳಬೇಕು,’ ಎಂದು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ – ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






