SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ಆರ್.ಎಸ್.ಎಸ್ (rss) ಸರಸಂಘ ಚಾಲಕ ಮೋಹನ್ ಭಾಗವತ್ (Mohan Bhagwat) ಅವರು ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಓ.ಟಿ.ರಸ್ತೆಯಲ್ಲಿರುವ ಆರ್.ಎಸ್.ಎಸ್ ಹಿರಿಯ ಸ್ವಯಂ ಸೇವಕ ದಿನೇಶ್ ಪೈ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಪ್ರಾಂತ ಮಟ್ಟದ ಬೈಠಕ್
ಶಿವಮೊಗ್ಗದ ತ್ಯಾವರೆಚಟ್ನಹಳ್ಳಿಯ ಶುಭಶ್ರೀ ಸಮುದಾಯ ಭವನದಲ್ಲಿ ಆರ್.ಎಸ್.ಎಸ್ ಪ್ರಾಂತ ಬೈಠಕ್ ನಡೆಯುತ್ತಿದೆ. ಮೂರು ದಿನದ ಬೈಠಕ್ ಇಂದಿನಿಂದ ಆರಂಭವಾಗಿದೆ. ಇದರಲ್ಲಿ ಭಾಗವಹಿಸಿ ಸ್ವಯಂ ಸೇವಕರಿಗೆ ಮಾರ್ಗದರ್ಶನ ಮಾಡಲು ಮೋಹನ್ ಭಾಗವತ್ (Mohan Bhagwat) ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಮೂರು ದಿನದ ಬೈಠಕ್ ನಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರದ 6 ಕಡೆ 2 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ಹಂಚಿದ ಭಕ್ತರು
ಕೋಟೆ ದೇಗುಲಕ್ಕೆ ಭೇಟಿ
ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಭೇಟಿ ನೀಡಿದರು. ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನದ ಆವರಣದಲ್ಲಿ ಅರ್ಚಕರ ಕುಟುಂಬ ಮತ್ತು ಆರ್.ಎಸ್.ಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ಫೋಟೊ ಕ್ಲಿಕ್ಕಿಸಿಕೊಂಡರು.

ಸಾಂತ್ವನ ಹೇಳಿದ ಮೋಹನ್ ಭಾಗವತ್
ಆರ್.ಎಸ್.ಎಸ್ ಹಿರಿಯ ಸ್ವಯಂ ಸೇವಕ ದಿನೇಶ್ ಪೈ ಅವರು ಇತ್ತೀಚೆಗೆ ನಿಧನರಾದರು. ಓ.ಟಿ.ರಸ್ತೆಯಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೋಹನ್ ಭಾಗವತ್ ಅವರ ಭೇಟಿ ಹಿನ್ನೆಲೆ ಕೋಟೆ ರಸ್ತೆ, ಓ.ಟಿ.ರಸ್ತೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



