25 ಸಾವಿರ ರೂ.ಗಾಗಿ ಚಾಕು ಇರಿದವನಿಗೆ ಜೈಲು, ಎಷ್ಟು ವರ್ಷ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 SEPTEMBER 2024 : ಮಾವಿನ ತೋಟದ ಗುತ್ತಿಗೆ ಹಣದ (MONEY) ವಿಚಾರದಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆಗೆ ಯತ್ನಿಸಿದ್ದವನಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿದೆ.

ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಮೂರು ತಿಂಗಳು ಸಾದಾ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿರಾಳಕೊಪ್ಪ ದಾಸರ ಕಾಲನಿಯ ಹಯಾತ್ ಸಾಬ್‌ (31) ಶಿಕ್ಷೆಗೆ ಒಳಗಾದವ.

ಏನಿದು ಪ್ರಕರಣ?

ಹಯಾತ್‌ ಸಾಬ್‌, 2022ರ ಮೇ 15ರಂದು ಹಳ್ಳೂರು ಕೇರಿಯ ಜಿಯಾವುಲ್ಲಾ ಖಾನ್ ಹತ್ಯೆಗೆ ಯತ್ನಿಸಿ ಚೂರಿ ಇರಿದಿದ್ದ. ಹಯಾತ್ ಮತ್ತು ಜಿಯಾವುಲ್ಲಾ ಅವರಿಗೆ ಹಿಂದಿನಿಂದಲೂ ಮಾವಿನ ತೋಟದ ಗುತ್ತಿಗೆ ವಿಚಾರವಾಗಿ ಹಣಕಾಸಿನ ವ್ಯವಹಾರವಿದ್ದು ಜಿಯಾವುಲ್ಲಾಗೆ 25 ಸಾವಿರ ರೂ. ಕೊಡುವುದನ್ನು ಹಯಾತ್ ಬಾಕಿ ಇರಿಸಿಕೊಂಡಿದ್ದ. ಹಾಗಾಗಿ ಹಣ ವಾಪಸ್‌ ನೀಡುವಂತೆ ಜಿಯಾವುಲ್ಲಾ ಕೇಳಿಕೊಂಡಿದ್ದ.

ಇದನ್ನೂ ಓದಿ » 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?

ಸಿಟ್ಟಿಗೆದ್ದ ಹಯಾತ್ ಶಿರಾಳಕೊಪ್ಪದ ಟೀ ಹೋಟೆಲ್‌ಗೆ ಕರೆಸಿಕೊಂಡು ಜಗಳ ತೆಗೆದು ಚಾಕುವಿನಿಂದ ಬೆನ್ನಿಗೆ ಇರಿದಿದ್ದ. ಈ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಶಿರಾಳಕೊಪ್ಪ ಠಾಣೆ ಪಿಎಸ್‌ಐ ರಮೇಶ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಆರೋಪ ಸಾಬೀತಾದ ಹಿನ್ನೆಲೆ ಹಯಾತ್‌ಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.

Banana-Mandi-In-Shimoga-APMC

ಇದನ್ನೂ ಓದಿ » ತೀರ್ಥಹಳ್ಳಿಯ ಯುವಕನಿಗೆ 5 ವರ್ಷ ಜೈಲು, 50 ಸಾವಿರ ರೂ. ದಂಡ

ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 5 ಸಾವಿರ ರೂ. ಅನ್ನು ಗಾಯಾಳು ಜಿಯಾವುಲ್ಲಾ ಖಾನ್‌ಗೆ ನೀಡಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎ.ಎಂ.ಸುರೇಶ್‌ಕುಮಾ‌ರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

HS-Sundaresh

ಇದನ್ನೂ ಓದಿ » ಇವು ಸಾಮಾನ್ಯ ಗುಂಡಿಗಳಲ್ಲ, ಬಂದ್‌ ಆಗಲು PM, CMಗಳೆ ಬರಬೇಕು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 15, 2024

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment