ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಂಜಪ್ಪ ಆಸ್ಪತ್ರೆ ಸಿಬ್ಬಂದಿಯೊಬ್ಬರ ಮೊಬೈಲ್ (Mobile) ಕಸಿದುಕೊಂಡ ಮಂಗವೊಂದು ಮರ ಹತ್ತಿ ಕುಳಿತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿತ್ತು. ಸುಮಾರು ಒಂದು ಗಂಟೆಯ ಪ್ರಹಸನದ ಬಳಿಕ ಮಂಗ ಮೊಬೈಲ್ ಬಿಟ್ಟು ಪರಾರಿಯಾಗಿದೆ.
ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯ ಕಿಟಕಿಯೊಳಗೆ ಕೈ ಹಾಕಿದ ಮಂಗ, ಆಸ್ಪತ್ರೆ ಸಿಬ್ಬಂದಿ ರೇಷ್ಮಾ ಎಂಬುವವರಿಗೆ ಸೇರಿದ ಮೊಬೈಲ್ ಎತ್ತಿಕೊಂಡು ಪರಾರಿಯಾಗಿತ್ತು.

ಮೊಬೈಲ್ ಕಸಿದುಕೊಂಡು ಆಸ್ಪತ್ರೆ ಪಕ್ಕದ ಮರವೇರಿ ಕುಳಿತಿದ್ದ ಮಂಗ ಜನರ ಕುತೂಹಲ ಮೂಡಿಸಿತ್ತು. ಮರದ ತುದಿಗೆ ಏರಿ ರೆಂಬೆಯೊಂದರ ಮೇಲೆ ಬಹು ಹೊತ್ತು ಕುಳಿತುಕೊಂಡಿತ್ತು. ಆಗಾಗ ಮೊಬೈಲನ್ನು ಎದೆಗವಚಿಕೊಳ್ಳುತ್ತಿತ್ತು. ಕೆಲವೊಮ್ಮೆ ಮೊಬೈಲ್ ಪರದೆ ಗಮನಿಸುತಿತ್ತು. ಇನ್ನು ಕೆಲವೊಮ್ಮೆ ಮೊಬೈಲ್ ಪರದೆ ಮೇಲೆ ಬೆರಳು ಆಡಿಸುತ್ತಾ, ಮೊಬೈಲ್ ಕಿವಿಗೆ ಹಿಡಿದು ಕುಳಿತಿತ್ತು.
ಮೊಬೈಲ್ ಹಿಡಿದು ಮರವೇರಿದ್ದ ಮಂಗದ ಹಾವಾಭಾವ ಗಮನಿಸಲು ದೊಡ್ಡ ಸಂಖ್ಯೆಯ ಜನರು ರಸ್ತೆ ಬದಿ ನಿಂತಿದ್ದರು. ಮಂಗದ ಕೈಯಿಂದ ಮೊಬೈಲ್ ಕಸಿದುಕೊಳ್ಳಲು ಏನೆಲ್ಲ ಮಾಡಬಹುದು ಎಂದು ಚರ್ಚಿಸುತ್ತಿದ್ದರು. ಕೆಲವರು ತಮ್ಮ ಮೊಬೈಲ್ಗಳಲ್ಲಿ ಈ ದೃಶ್ಯ ಸೆರೆ ಹಿಡಿಯುತ್ತಿದ್ದರು. ಸವಾರರು ಮಂಗಾಟ ಗಮನಿಸಲು ವಾಹನ ನಿಲ್ಲಿಸುತ್ತಿದ್ದರಿಂದ ಸಂಚಾರ ದಟ್ಟಣೆಯು ಉಂಟಾಯಿತು.

ನಂಜಪ್ಪ ಆಸ್ಪತ್ರೆ ಸಿಬ್ಬಂದಿ ಕಟ್ಟಡದ ಮೇಲೇರಿಗೆ ಮಂಗಕ್ಕೆ ಬಾಳೆ ಹಣ್ಣು ತೋರಿಸಿ ಗಮನ ಸೆಳೆದರು. ಆಸೆಯಿಂದ ಕಟ್ಟಡದ ಮೇಲೆ ಬಂದು ಬಾಳೆ ಹಣ್ಣು ತೆಗೆದುಕೊಳ್ಳುತ್ತಿದ್ದಂತೆ ಪಟಾಕಿ ಸಿಡಿಸಿದರು. ಕೊನೆಗೆ ಬಾಳೆ ಹಣ್ಣು ಎತ್ತಿಕೊಂಡು, ಮೊಬೈಲ್ ಬಿಟ್ಟು ಮಂಗ ಪರಾರಿಯಾಯಿತು.

ಇದನ್ನೂ ಓದಿ » ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ




LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






