SHIVAMOGGA LIVE NEWS | 31 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ನೈತಿಕ ಪೊಲೀಸ್’ಗಿರಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಬಸ್ಸಿನಲ್ಲಿ ಬಂದಿದ್ದ ಯುವಕ, ಯುವತಿ ಮೇಲೆ ನೈತಿಕ ಪೊಲೀಸ್’ಗಿರಿ ನಡೆದಿದೆ.
ಏನಿದು ಪ್ರಕರಣ?
ಚಿತ್ರದುರ್ಗದಿಂದ ತೀರ್ಥಹಳ್ಳಿಯ ಕುಪ್ಪಳಿಗೆ ತೆರಳಲು ಯುವಕ ಮತ್ತು ಯುವತಿ ಬಂದಿದ್ದಾರೆ. ಬಸ್ಸಿಗಾಗಿ ವಿಚಾರಿಸುತ್ತಿದ್ದಾಗ ಯುವಕರ ಗುಂಪೊಂದು ಇವರನ್ನು ಅಡ್ಡಗಟ್ಟಿದ್ದಾರೆ. ಗುಂಪಿನಲ್ಲಿ ಆರೇಳು ಯುವಕರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವಕ, ಯುವತಿಯನ್ನು ಪ್ರಶ್ನೆ ಮಾಡಿರುವ ಗುಂಪು, ಯಾರು ನೀವು? ಇಲ್ಲಿಗೇಕೆ ಬಂದಿದ್ದೀರ? ಮುಸ್ಲಿಂ ಹುಡುಗಿಯನ್ನು ಯಾಕೆ ಕರೆದುಕೊಂಡು ಬಂದಿದ್ದೀಯ? ಎಂದು ಯುವಕರು ಪ್ರಶ್ನಿಸಿದ್ದಾರೆ. ಅಲ್ಲದೆ ಯುವಕನ್ನು ತಳ್ಳಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಜನರು ಗುಂಪುಗೂಡುತ್ತಿದ್ದಂತೆ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿ.ಎಡ್ ಕೋರ್ಸ್’ನ ಡಾಕ್ಯೂಮೆಂಟರಿ ಮಾಡುವ ಉದ್ದೇಶದಿಂದ ತಾವು ಕುಪ್ಪಳಿಗೆ ತೆರಳುತ್ತಿರುವುದಾಗಿ ಯುವಕ, ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ತಮ್ಮನ್ನು ಬೈದು, ತಳ್ಳಾಡಿದ ಯುವಕರ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






