ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ, ಬಸ್ ನಿಲ್ದಾಣದಲ್ಲಿ ಯುವಕ, ಯುವತಿಯನ್ನು ಅಡ್ಡಗಟ್ಟಿದ ಗುಂಪು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 31 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದಲ್ಲಿ ನೈತಿಕ ಪೊಲೀಸ್’ಗಿರಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಬಸ್ಸಿನಲ್ಲಿ ಬಂದಿದ್ದ  ಯುವಕ, ಯುವತಿ ಮೇಲೆ ನೈತಿಕ ಪೊಲೀಸ್’ಗಿರಿ ನಡೆದಿದೆ.

ಏನಿದು ಪ್ರಕರಣ?

ಚಿತ್ರದುರ್ಗದಿಂದ ತೀರ್ಥಹಳ್ಳಿಯ ಕುಪ್ಪಳಿಗೆ ತೆರಳಲು ಯುವಕ ಮತ್ತು ಯುವತಿ ಬಂದಿದ್ದಾರೆ. ಬಸ್ಸಿಗಾಗಿ ವಿಚಾರಿಸುತ್ತಿದ್ದಾಗ ಯುವಕರ ಗುಂಪೊಂದು ಇವರನ್ನು ಅಡ್ಡಗಟ್ಟಿದ್ದಾರೆ. ಗುಂಪಿನಲ್ಲಿ ಆರೇಳು ಯುವಕರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಯುವಕ, ಯುವತಿಯನ್ನು ಪ್ರಶ್ನೆ ಮಾಡಿರುವ ಗುಂಪು, ಯಾರು ನೀವು? ಇಲ್ಲಿಗೇಕೆ ಬಂದಿದ್ದೀರ? ಮುಸ್ಲಿಂ ಹುಡುಗಿಯನ್ನು ಯಾಕೆ ಕರೆದುಕೊಂಡು ಬಂದಿದ್ದೀಯ? ಎಂದು ಯುವಕರು ಪ್ರಶ್ನಿಸಿದ್ದಾರೆ. ಅಲ್ಲದೆ ಯುವಕನ್ನು ತಳ್ಳಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಜನರು ಗುಂಪುಗೂಡುತ್ತಿದ್ದಂತೆ ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.  

ಬಿ.ಎಡ್ ಕೋರ್ಸ್’ನ ಡಾಕ್ಯೂಮೆಂಟರಿ ಮಾಡುವ ಉದ್ದೇಶದಿಂದ ತಾವು ಕುಪ್ಪಳಿಗೆ ತೆರಳುತ್ತಿರುವುದಾಗಿ ಯುವಕ, ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ತಮ್ಮನ್ನು ಬೈದು, ತಳ್ಳಾಡಿದ ಯುವಕರ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment