SHIVAMOGGA LIVE NEWS | 10 JULY 2024
SHIMOGA : ನೆಟ್ವರ್ಕ್ ಸಮಸ್ಯೆ ಮತ್ತು ಟವರ್ ಅಳವಡಿಕೆ ಸಂಬಂಧ BSNL ಹಿರಿಯ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ಚರ್ಚೆ ನಡೆಸಿದರು. ಸಾಗರ ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಈವರೆಗೂ ಜಿಲ್ಲೆಯಲ್ಲಿ ಟವರ್ ಅಳವಡಿಕೆ ಕಾಮಗಾರಿ ಸಾಗಿರುವ ಹಂತ, ಟವರ್ ಅಭಿವೃದ್ಧಿಗೆ ಅಗತ್ಯ ಅನುದಾನ ಕೊರತೆ ಉಂಟಾಗಿರುವುದು, ನೂತನ ಟವರ್ ಅಳವಡಿಕೆಗೆ ಸಾರ್ವಜನಿಕರಿಂದ ಪ್ರಸ್ತಾವನೆ ಬಂದಿರುವುದು, ಅರಣ್ಯ ಇಲಾಖೆಯಿಂದ ನೂತನ ಟವರ್ ಅಳವಡಿಕೆಗೆ ತೊಂದರೆಯಾಗಿರುವುದು, ಟವರ್ ಅಳವಡಿಕೆಯಾಗಿ ನಂತರ ಅಗತ್ಯ ತಾಂತ್ರಿಕ ಸಲಕರಣೆ ಅಳವಡಿಸುವ ಬಾಕಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಟವರ್ ಅಳವಡಿಕೆ ಕುರಿತು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಗವೇಂದ್ರ ಅಗತ್ಯ ಸಲಹೆ ನೀಡಿದರು. ಶೀಘ್ರವೇ ಕಾಮಗಾರಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ – ಸೊಪ್ಪು ತರಲು ಕಾಡಿಗೆ ಹೋಗಿದ್ದ ವ್ಯಕ್ತಿ ಮೇಲೆ ಹಂದಿ ದಾಳಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200