| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
133 ಹುದ್ದೆ ಭರ್ತಿಗೆ ಕ್ರಮ
ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಸಿ ದರ್ಜೆಯ 133 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ ಪಾಲಿಸಬೇಕು. ಉಳಿದ ಖಾಯಂ ಹುದ್ದೆಗಳ ನೇಮಕಾತಿಗಾಗಿ ಆದಷ್ಟು ಬೇಗನೆ ಇಲಾಖೆಯ ನೇಮಕಾತಿ ಮತ್ತು ವೃಂದ ನಿಯಮಾವಳಿಯನ್ನು ರಚಿಸುವಂತೆ ಅವರು ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಅವರು ಸೂಚನೆ ನೀಡಿದರು.
ರೇಡಿಯೋಲಜಿಗೆ ತಜ್ಞ ವೈದ್ಯರ ನೇಮಕಕ್ಕೆ ಸೂಚನೆ
ರೇಡಿಯೋಲಜಿ ವಿಭಾಗದ ಎಲ್ಲಾ ಉಪಕರಣಗಳು ಸಿಮ್ಸ್ನಲ್ಲಿ ಲಭ್ಯವಿದ್ದು, ತಜ್ಞ ವೈದ್ಯರ ನೇಮಕಾತಿ ಆಗಬೇಕಿದೆ. ಅದುವರೆಗೆ ಲಭ್ಯವಿರುವ ಬಳಕೆದಾರರ ನಿಧಿಯನ್ನು ಉಪಯೋಗಿಸಿಕೊಂಡು ತಜ್ಞ ವೈದ್ಯರ ಸೇವೆಯನ್ನು ಪಡೆಯಲು ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಬೇಕು. ಬಳಕೆದಾರರ ನಿಧಿ ಸಂಗ್ರಹವನ್ನು ಹೆಚ್ಚಿಸಲು ಕ್ರಮ ಕೈಗೊಂಡು, ಅದರ ಮೂಲಕ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಬೇಕು ಎಂದು ರಾಘವೇಂದ್ರ ಅವರು ಹೇಳಿದರು.
ಮಕ್ಕಳ ಪ್ರತ್ಯೇಕ ವಿಭಾಗಕ್ಕೆ ಎಂಟು ಕೋಟಿ
ತಾಯಂದಿರ ಮತ್ತು ಮಕ್ಕಳ ಪ್ರತ್ಯೇಕ ವಿಭಾಗವನ್ನು ಆರಂಭಿಸಲು 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಕಿ ದುರ್ಘಟನೆ ಸಂಭವಿಸಿರುವ ಮಕ್ಕಳ ವಿಭಾಗದ ದುರಸ್ತಿ ಕಾರ್ಯವನ್ನು ಎರಡು ದಿನಗಳ ಒಳಗಾಗಿ ಪೂರ್ಣಗೊಳಿಸಿ, ಸೇವೆ ಆರಂಭಿಸಲು ಪ್ರಾರಂಭಿಸಬೇಕು. ಕ್ಯಾಥ್ಲ್ಯಾಬ್ ಆರಂಭಿಸಲು ಈಗಾಗಲೇ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದರು ಸೂಚನೆ ನೀಡಿದರು.
ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬಯೋಮೆಟ್ರಿಕ್ ವ್ಯವಸ್ಥೆಯನ್ನು ಮೆಡಿಕಲ್ ಕಾಲೇಜು ವತಿಯಿಂದ ಸಹ ಅಳವಡಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()