ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 NOVEMBER 2022
ಶಿವಮೊಗ್ಗ | ಸೋಗಾನೆಯಲ್ಲಿ ತಲೆ ಎತ್ತುತ್ತಿರುವ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ನಂಬಿಸಿ ವಂಚನೆ ಮಾಡುತ್ತಿರುವ ಕುರಿತು ಆಪಾದನೆಗಳು ಕೇಳಿ ಬಂದಿವೆ. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ವೇಳೆ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಪತ್ರಕರ್ತರು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಆಗ ಸಂಸದ ರಾಘವೇಂದ್ರ ಹೇಳಿದ್ದೇನು. (shimoga airport jobs)

(shimoga airport jobs)
‘ಮೋಸ ಹೋಗಬೇಡಿ..’
‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೇಮಕಾತಿ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಭದ್ರತಾ ಪಡೆಗೆ (ಕೆಎಸ್ಐಎಸ್ಎಫ್) ವಹಿಸುವ ಸಾಧ್ಯತೆ ಇದೆ. ಉಳಿದ ಯಾವುದೆ ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಯಾರೂ ಮೋಸ ಹೋಗಬೇಡಿ’ ಎಂದು ಸಂಸದ ಬಿ.ವೈ.ರಾಘವೇಂದ್ರ ಎಚ್ಚರಿಸಿದರು.
ALSO READ – ಸಿಗಂದೂರು ಬಳಿ ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಲಾಗುತ್ತಿದೆ. ಕೆಲವು ಉದ್ಯೋಗಾಕಾಂಕ್ಷಿಗಳು ಹಣ ಕೊಡಲು ಸಿದ್ಧವಾಗಿದ್ದಾರೆ ಎಂದು ಪತ್ರಕರ್ತರು ಸಂಸದ ರಾಘವೇಂದ್ರ ಅವರ ಗಮನ ಸೆಳೆದರು.

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






