SHIVAMOGGA LIVE | 9 JUNE 2023
SHIMOGA : ವಿಮಾನ ನಿಲ್ದಾಣ (Airport) ಉದ್ಘಾಟನೆಯಾಗಿ ಮೂರು ತಿಂಗಳಾದರು ವಿಮಾನ ಹಾರಾಟ ಆರಂಭವಾಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜನರು ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಇಂಡಿಗೋ ಸಂಸ್ಥೆಯ ವಿಳಂಬ ಧೋರಣೆ ವಿರುದ್ಧ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ವಿಮಾನಯಾನ ಸಂಸ್ಥೆಗೆ ವಾರ್ನಿಂಗ್ ನೀಡಿರುವುದಾಗಿ ತಿಳಿಸಿದರು.
ಕುವೆಂಪು ರಂಗಮಂದಿರದಲ್ಲಿ ನೆಹರು ಯುವ ಕೇಂದ್ರ, ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ, ಎಟಿಎನ್ಸಿ ಕಾಲೇಜು ವತಿಯಿಂದ ಆಯೋಜಿಸಿದ್ದ ಯುವ ಉತ್ಸವದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿರುವುದಾಗಿ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸಂಸದರು ಹೇಳಿದ್ದೇನು?
ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ, ಯಶವಂತಪುರ ಎಕ್ಸ್ಪ್ರೆಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್, ರೈಲ್ವೆ ಇಲಾಖೆಯಿಂದ ಆದೇಶ
ಈಗ ಇಂಡಿಗೋ ಸಂಸ್ಥೆ ದುರಾಸೆ ಮಾಡುತ್ತಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗವನ್ನು ಉಡಾನ್ ಯೋಜನೆ ಅಡಿ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ಸಬ್ಸಿಡಿ ಹೆಚ್ಚಳವಾಗಲಿದೆ. ಇನ್ನೂ ಒಂದೆರಡು ಕೋಟಿ ರೂ. ಸಬ್ಸಿಡಿ ಸಿಗಲಿದೆ ಎಂಬ ಲೆಕ್ಕಾಚಾರ. ಆದರೆ ರಾಜಧಾನಿಗಳಿಗೆ ಉಡಾನ್ ಯೋಜನೆ ನೀಡುವುದಿಲ್ಲ. ವಿಮಾನ ಹಾರಾಟ ತಕ್ಷಣದಿಂದ ಆರಂಭವಾಗಬೇಕು ಎಂದು ಈಗಾಗಲೆ ವಾರ್ನಿಂಗ್ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ ನೆಟ್ಟಿಗರು, ಏನೇನು ಪ್ರಶ್ನೆ ಕೇಳಿದ್ದಾರೆ?