Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?

ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?

16/02/2022 9:08 AM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಶಿವಮೊಗ್ಗ ನಗರಕ್ಕೆ ಹೊಂದಿಕೊಂಡ ಹಾಗೆ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್’ಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿದರು.

Shimoga Live News Reach Country Wise Reach

ಎಲ್ಲೆಲ್ಲೆ ಪರಿಶೀಲನೆ ನಡೆಸಿದರು?

ಶಿವಮೊಗ್ಗದಲ್ಲಿ 165 ಕೋಟ ರೂ. ವೆಚ್ಚದಲ್ಲಿ ನಾಲ್ಕು ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಇವತ್ತು ಸಂಸದ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ – ಭದ್ರಾವತಿ ರಸ್ತೆಯ ಕಡದಕಟ್ಟೆ, ಶಿವಮೊಗ್ಗದ ವಿದ್ಯಾನಗರ, ಸವಳಂಗ ರಸ್ತೆಯ ಉಷಾ ನರ್ಸಿಂಗ್ ಹೋಂ ಸಮೀಪ ಮತ್ತು ಕಾಶೀಪುರದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಕಾಮಗಾರಿ ಸ್ಥಳಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದರು.

ಏನೆಲ್ಲ ಸೂಚನೆ ನೀಡಿದರು?

ಕಾಮಗರಿ ಸ್ಥಳ ಪರಿಶೀಲನೆ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಕಾಮಗಾರಿ ಕುರಿತು ಮಾಹಿತಿ ನೀಡಿದರು.

» ರೈಲ್ವೆ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಅಂದಾಜು ವೆಚ್ಚ 116.31 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕಾಮಗಾರಿಯ ವೆಚ್ಚದ ಶೇ. 50 ರಷ್ಟು ಹಾಗೂ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವು ಭರಿಸಲಿದೆ.

» ಈ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ 70.05 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದೆ. ರೈಲ್ವೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಈಗಾಗಲೇ 8.61 ಕೋಟಿ ರೂ. ಹಾಗೂ ಭೂಸ್ವಾಧೀನಕ್ಕಾಗಿ 20.60 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

» ರೈಲ್ವೆ ಇಲಾಖೆಯು ಈ ಮೂರು ಕಾಮಗಾರಿಗಳನ್ನು ನಿರ್ಮಾಣ ಕಂಪನಿಗೆ (ಎಸ್.ಆರ್.ಸಿ. ಕಂಪನಿ) ಗುತ್ತಿಗೆ ನೀಡಿದೆ. ಈಗಾಗಲೇ ಮೂರು ಕಾಮಗಾರಿಗಳು ಭರದಿಂದ ಜರಗುತ್ತಿದೆ.

» ಮು೦ದಿನ 10 ರಿಂದ 12 ತಿಂಗಳುಗಳಲ್ಲಿ ಕಾಮಗಾರಿಯನ್ನು ಪೂರ್ಣ ಮಾಡಲಾಗುವುದು ಹಾಗೂ ಜಿಲ್ಲಾಡಳಿತವು ಭೂಸ್ವಾಧೀನ ಹಾಗೂ ಯುಟಿಲಿಟಿ ಷಿಪ್ಟಿಂಗ್’ಗಾಗಿ ಅಗತ್ಯ ಕ್ರಮವನ್ನು ಕೈಗೊಂಡಿದ್ದು, ಶೀಘ್ರದಲ್ಲಿಯೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ,

» ಕಾಶಿಪುರ ಹಾಗೂ ಸವಳ೦ಗ ರಸ್ತೆ ಮೇಲ್ವೇತುವೆಗಳಲ್ಲಿ ನಾಗರೀಕರಿಗೆ ನೆರವಾಗುವ ದೃಷ್ಟಿಯಿಂದ Under Pass ನ್ನು ಸಹ ನಿರ್ಮಿಸಲು ನಿರ್ಧರಿಸಲಾಗಿದೆ.

» ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ 49ರ ಬದಲಿಗೆ 60.76 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಕೆಳಸೇತುವೆ ನಿರ್ಮಾಣವಾಗಲಿದೆ.

» ಶಿವಮೊಗ್ಗ ನಗರದ ಕಾಶಿಪುರ ರೈಲ್ವೆ ಲೆವೆಲ್ ಕ್ರಾಸಿಂಗ್ 52ರ ಬದಲಿಗೆ 29.63 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ಹಾಗೂ ಪಿ.ಟಿ. ಕಾಲೋನಿಗೆ ಹೋಗುವ ರಸ್ತೆಯಲ್ಲಿನ ರೈಲ್ವೆ ಲೆವೆಲ್ ಕ್ರಾಸಿಂಗ್‌ಗೆ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡಲಾಗುತ್ತಿದೆ.

» ಭದ್ರಾವತಿ ನಗರದ ಕಡದಕಟ್ಟೆ ಬಳಿ ಇರುವ ರೈಲ್ವೆ ಲೆವೆಲ್ ಕ್ರಾಸಿಂಗ್ 34ರ ಬದಲಿಗೆ 25.92 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿದೆ.

» ಶಿವಮೊಗ್ಗ ನಗರದ ವಿದ್ಯಾನಗರ ಬಳಿ 43.90 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ವೃತ್ತಕಾರದ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.

BY Raghavendra Visit Vidya Nagara Bridge

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಪೊಲೀಸ್ ಅಧೀಕ್ಷಕರಾದ ಬಿ. ಎಂ. ಲಕ್ಷ್ಮಿ ಪ್ರಸಾದ್. ರೈಲ್ವೆ ಅಧಿಕಾರಿ ಶ್ರೀಧರ್ ಮೂರ್ತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮಗಾರಿ ಪರಿಶೀಲೆಗೆ ತೆರಳಿದ್ದ ಸಂದರ್ಭ ರೈಲ್ವೆ ಅಧಿಕಾರಿ ಶ್ರೀಧರಮೂರ್ತಿ, ಆಂಜನೇಯ ಪ್ರಸಾದ್, ಮುಖ್ಯ ಇಂಜಿನಿಯರ್ ಪ್ರಭಾಕರನ್, ವಿಜಯ್ ಭಾಸ್ಕರ್, ರಾಜ ಕುಮಾರ್, ಬಸವರಾಜಪ್ಪ, ಶಶಿ ತಿವಾರಿ, ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್, ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ, ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆಯ ಸದಸ್ಯರು, ಸ್ಥಳಿಯ ಮುಖಂಡರು ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ | ‘ಈ ರೈಲ್ವೆ ಯೋಜನೆಗೆ ಕಲ್ಲು ಹಾಕುವ ಕೆಲಸ ಮಾಡಿದರೆ ಸುಮ್ಮನಿರಲ್ಲ’

Nanjappa Hospital Cancer Care Strawberry Advertisement

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Police Bus at Shimoga BH Road ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?
Next Article Tunga Bridge Pot holes cleared ಸಂಸದರ ಭೇಟಿಗೂ ಮುಂಚೆ ತುಂಗಾ ನದಿ ಹೊಸ ಸೇತುವೆ ಮೇಲಿನ ಗುಂಡಿಗಳು ಮಾಯ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Car-drowned-in-Bhadra-canal-at-Danavadi-village-near-holehonnuru.
BHADRAVATHI

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?