ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020
ಎಂಪಿಎಂ ಕಾರ್ಖಾನೆಗೆ ಲೀಸ್ಗೆ ನೀಡಿದ್ದ ಅರಣ್ಯವನ್ನು ಸರ್ಕಾರ ವಾಪಸ್ ಪಡೆದು, ಖಾಸಗಿ ಪಾಲಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿ ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗದ ಹೆಲಿಪ್ಯಾಡ್ನಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಎಂಪಿಎಂ ಕಾರ್ಖಾನೆ ಸ್ಥಗಿತವಾಗಿದೆ. ಕಾರ್ಖಾನೆಗೆ 20,005.42 ಹೆಕ್ಟೇರ್ ಅರಣ್ಯ ಭೂಮಿಯನ್ನು ಲೀಸ್ಗೆ ನೀಡಲಾಗಿತ್ತು. ಈ ಅರಣ್ಯವನ್ನು ಸರ್ಕಾರ ಹಿಂಪಡೆಯಲು ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.
ಕಾರ್ಖಾನೆಯ ಖಾಸಗೀಕರಣದ ಹೆಸರಲ್ಲಿ ಅರಣ್ಯ ಖಾಸಗಿ ಪಾಲಾಗುವ ಹುನ್ನಾರ ನಡೆಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪ ಮಾಡಿ, ಅರಣ್ಯವನ್ನು ಉಳಿಸಬೇಕು ಎಂದು ಒಕ್ಕೂಟದ ಸದಸ್ಯರು ಮನವಿ ಮಾಡಿದರು.
ವಕೀಲ ಕೆ.ಪಿ.ಶ್ರೀಪಾಲ್ ನೇತೃತ್ವದ ನಿಯೋಗ ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200