ಎಂಪಿಎಂ ಅರಣ್ಯ ಖಾಸಗೀಕರಣಕ್ಕೆ ಹುನ್ನಾರ, ಸಿಎಂ, ಪುತ್ರರು ಶಾಮೀಲು ಆರೋಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020

ಗುತ್ತಿಗೆ ಅವಧಿ ಮುಗಿದರೂ ಎಂಪಿಎಂ ಅರಣ್ಯ ಭೂಮಿಯನ್ನು ಸರ್ಕಾರ ಹಿಂಪಡೆದಿಲ್ಲ. ಇದನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸುತ್ತಿರುವ ಕುರಿತು, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆ, ಪರಿಸರವಾದಿಗಳು ಆರೋಪಿಸಿದ್ದರು. ಈಗ ಅರಣ್ಯ ಭೂಮಿ ಖಾಸಗೀಕರಣ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಆರೋಪ ಕೇಳಿ ಬಂದಿದೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ನಮ್ಮೂರಿಗೆ ಅಕೇಶಿಯಾ ಬೇಡ ಹೋರಾಟ ಸಮಿತಿ ಪ್ರಮುಖರು, ಸಿಎಂ ಮತ್ತು ಅವರ ಪುತ್ರ ವಿರುದ್ಧ ಆರೋಪ ಮಾಡಿದ್ದಾರೆ.

ಯಾರೆಲ್ಲ ಏನೇನು ಹೇಳಿದರು?

ಕೆ.ಪಿ.ಶ್ರೀಪಾಲ್, ವಕೀಲ

ಎಂಪಿಎಂ ಗೆ ಸೇರಿದ 33,000 ಹೆಕ್ಟೇರ್ ಅರಣ್ಯ ಭೂಮಿಯನ್ನು ಖಾಸಗೀಕರಣ ಮಾಡಲು ಮುಖ್ಯಮಂತ್ರಿಗಳ ಕುಟುಂಬ ಹೆಚ್ಚು ಆಸಕ್ತಿ ವಹಿಸಿದೆ. ಈ ಅರಣ್ಯವನ್ನು ರೀನೀವಲ್ ಮಾಡುವುದಕ್ಕೆ ಸಂಸದ ರಾಘವೇಂದ್ರ ,ಮುಖ್ಯ ಮಂತ್ರಿಗಳು ಹೇಳ್ತಿದಾರೆ ಎಂದು ಬೆಂಗಳೂರಿನ ಅರಣ್ಯ ಇಲಾಖೆ ಮುಖ್ಯ ಕಾರ್ಯದರ್ಶಿ(ಸಿ.ಸಿ.ಎಫ್) ಮನವಿ ನೀಡಲು ಹೋದಾಗ ಹೇಳಿದ್ದಾರೆ. ಅವರು ಮಾತನಾಡಿರುವ ವಿಡಿಯೋ ಇದೆ  ಎಂದು ಹೇಳಿದರು.

126231431 1270375539990530 9035757730490998698 o.jpg? nc cat=100&ccb=2& nc sid=730e14& nc ohc=B5SptJytkL0AX FXuz & nc ht=scontent.fblr11 1

ಪ್ರೊ,ರಾಜೇಂದ್ರ ಚೆನ್ನಿ, ನಿವೃತ್ತ ಪ್ರಾಧ್ಯಾಪಕ

ಮಲೆನಾಡಿಗೆ ಅಕೇಶಿಯ ಅಪಾಯಕಾರಿಯಾಗಿದೆ. ನಲವತ್ತು ವರ್ಷಗಳ ಹಿಂದೆ ನೆಡುತೋಪುಗಳನ್ನು ಮಾಡಿ ಪರಿಸರದ ವಿನಾಶ ಆಗಿದೆ. ಎಂಪಿಎಂ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದೆ. ನಲವತ್ತು ವರ್ಷಗಳ ಹಿಂದೆ ಕಾರ್ಖಾನೆಯನ್ನು ಮುಂದೊಮ್ಮೆ ಖಾಸಗಿಯವರಿಗೆ ನೀಡಿದರೆ ಅರಣ್ಯನ್ನು ಅರಣ್ಯ ಇಲಾಖೆಗೆ ನೀಡಬೇಕೇಂದು ಲೀಸ್‍ನಲ್ಲೆ ಇದೆ. ಒಪ್ಪಂದದಂತೆ 33 ಸಾವಿರ ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿ ಸಹಜ ಅರಣ್ಯ ಬೆಳೆಸಲು ಸಹಕಾರ ನೀಡಬೇಕು.

ಕೆ.ಟಿ.ಗಂಗಾಧರ್, ರೈತ ಮುಖಂಡ

ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ  ತಂದಾಗಲೇ ಗೊತ್ತಾಗಿತ್ತು. ಇದು ಭೂಮಿ ಕಬಳಿಸುವ ಯೋಜನೆ ಅಂತಾ. ಅದರ ಮುಂದುವರೆದ ಭಾಗವೇ ಈ ಎಂಪಿಎಂ ಅರಣ್ಯ ಭೂಮಿ ಖಾಸಗೀಕರಣ. ಕಸ್ತೂರಿ ರಂಗನ್ ಹಾಗೂ ಮಾದವ್ ಗಾಡ್ಗಿಳ್ ವರದಿ ತಂದು ಅರಣ್ಯ ಉಳಿಸುತ್ತೇವೆ ಅಂತಾ ಮಂತ್ರಿಗಳು, ಮುಖ್ಯಮಂತ್ರಿಗಳು ಹೇಳ್ತಾರೆ. ಈ ಆಸಕ್ತಿ ಎಂಪಿಎಂ ಅರಣ್ಯ ಭೂಮಿ ಮೇಲೆ ಯಾಕೆ ಇಲ್ಲ. ಮುಖ್ಯ ಮಂತ್ರಿಗಳು, ಅರಣ್ಯ ಮಂತ್ರಿಗಳನ್ನು ಭೇಟಿ ಮಾಡಿ ಆಯಿತು. ಆದರೆ ಉಪಯೋಗ ಇಲ್ಲ. ಜನಾಶಕ್ತಿ ಹತ್ತಿರ ತೆಗೆದುಕೊಂಡು ಹೋಗಿ ಜನವಿರೋಧಿ ಆಡಳಿತಕ್ಕೆ ಉತ್ತರ ಕೊಡಬೇಕಿದೆ.

ದಲಿತ ಸಂಘರ್ಷ ಸಮಿತಿಯ ಗುರುಮೂರ್ತಿ, ಪರಿಸರವಾದಿ ಶೇಖರ್ ಗೌಳೇರ್, ಕೃಷ್ಣಮೂರ್ತಿ ಹಿಳ್ಳೋಡಿ ,ಚೆನ್ನವೀರ್, ಬಾಲುನಾಯ್ಕ್ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment