ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಈದ್ಗಾ ಮೈದಾನಕ್ಕೆ ಬೇಲಿ (fencing) ಹಾಕಿದ್ದ ವಿವಾದ ಹೊಸ ಸ್ವರೂಪ ಪಡೆದುಕೊಂಡಿದೆ. ಇವತ್ತು ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿದ್ದು, ಮೈದಾನವು ವಕ್ಫ್‌ ಆಸ್ತಿ ಎಂದು ಜಿಲ್ಲಾಧಿಕಾರಿಗೆ ದಾಖಲೆ ಒದಗಿಸಿದೆ. ಇನ್ನೊಂದೆಡೆ ಈದ್ಗಾ ಮೈದಾನದಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇವತ್ತು ಇಡೀ ದಿನ ಏನೇನಾಯ್ತು?

[su_note note_color=”#f1f1f1″ text_color=”#000000″ radius=”0″]

ಬೆಳಗ್ಗೆಯು ಮುಂದುವರೆದ ಬಂದೋಬಸ್ತ್‌

ಬೇಲಿ ಹಾಕಿರುವುದಕ್ಕೆ ವಿರೋಧ, ಬೇಲಿ ತೆರವು ಕಾರ್ಯಾಚರಣೆ ಹಿನ್ನೆಲೆ ಈದ್ಗಾ ಮೈದಾನಕ್ಕೆ ಬಿಗಿ ಬಂದೋಬಸ್ತ್‌ ಹಾಕಲಾಗಿತ್ತು. ಇವತ್ತೂ ಬಂದೋಬಸ್ತ್‌ ಮುಂದುವರೆದಿತ್ತು. ಮೈದಾನದ ಸುತ್ತಲು ಕೆಎಸ್‌ಆರ್‌ಪಿ, ಡಿ.ಎ.ಆರ್‌ ಪೊಲೀಸರನ್ನು ನಿಯೋಜಿಸಲಾಗಿತ್ತು.

Edga Ground Fencing Row in Shimoga
ಶಿವಮೊಗ್ಗದ ಈದ್ಗಾ ಮೈದಾನದ ಮುಂಭಾಗ ಬ್ಯಾರಿಕೇಡ್‌ ಹಾಕಿರುವುದು.

ಮೈದಾನದ ಸುತ್ತಲು ಇರುವ ಅಂಗಡಿ ಮುಂಗಟ್ಟು ಬಂದ್‌ ಮಾಡಿಸಲಾಗಿತ್ತು. ಆದರೆ ಬ್ಯಾಂಕ್‌, ಎ.ಟಿ.ಎಂ, ಮೆಡಿಕಲ್‌ ಶಾಪ್‌, ಕೆಲವು ಕಚೇರಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಿಲಕನಗರ ಮುಖ್ಯರಸ್ತೆಯಲ್ಲಿ ಬ್ಯಾರಿಕೇಡ್‌ ಹಾಕಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

Edga Ground Fencing Row in Shimoga
ಈದ್ಗಾ ಮೈದಾನ ಸಮೀಪ ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗಿತ್ತು.

[/su_note]

ಇದನ್ನೂ ಓದಿ » ಭದ್ರಾವತಿಯಲ್ಲಿ ರಾತ್ರೋರಾತ್ರಿ ದಿಢೀರ್‌ ರಸ್ತೆ ತಡೆ, ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಪ್ರತಿಭಟನೆ, ಕಾರಣವೇನು?

ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

ಇನ್ನು, ಬೇಲಿ (fencing) ವಿವಾದದ ಬೆನ್ನಿಗೆ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್‌ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯದವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿದ್ದ ಪ್ರಮುಖಾಂಶ ಇಲ್ಲಿದೆ.

Edga Ground Fencing Row in Shimoga
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ.

» ಪ್ರಮುಖಾಂಶ 1 : ತಿಲಕನಗರದ ಸುನ್ನಿ ಈದ್ಗಾ ಮೈದಾನ ವಕ್ಫ್‌ ಆಸ್ತಿ. ಮುನ್ಸಿಪಲ್‌ ಖಾತೆಯನ್ನು ಹೊಂದಿದೆ. ಈ ಮೈದಾನವು ಗಾಂಧಿ ಬಜಾರ್‌ನ ಮರ್ಕಜಿ ಸುನ್ನಿ ಜಾಮಿಯಾ ಮಸೀದಿ ಅಧೀನದಲ್ಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸ್ನೇಹಿತರೊಂದಿಗೆ ತೆರಳಿದ್ದ ಬಾಲಕ, ನೀರಿನಲ್ಲಿ ಮುಳುಗಿ ಸಾವು

» ಪ್ರಮುಖಾಂಶ 2 : ಈದ್ಗಾ ಮೈದಾನ ಮುಸ್ಲಿಂ ಸಮುದಾಯಕ್ಕೆ ಪವಿತ್ರ ಸ್ಥಳ. ಇಲ್ಲಿ ಅನಧಿಕೃತವಾಗಿ ವಾಹನ ಪಾರ್ಕಿಂಗ್‌ ಮಾಡಲಾಗುತ್ತಿತ್ತು. ರಾತ್ರಿ ವೇಳೆ ಮತ್ತು ರಜಾ ದಿನಗಳಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದರು. ಈ ಸ್ಥಳದ ಸ್ವಚ್ಛತೆಗೆ ಲಕ್ಷಾಂತರ ರೂ. ಖರ್ಚಾಗುತ್ತಿದೆ.

Edga Ground Fencing Row in Shimoga
ಶಿವಮೊಗ್ಗ ಈದ್ಗಾ ಮೈದಾನ ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್‌ ಅಳವಡಿಕೆ.

» ಪ್ರಮುಖಾಂಶ 3 : ಮೈದಾನದ ಅಭಿವೃದ್ಧಿ ಕಾರ್ಯ ಮಾಡಿ, ಸಿಸಿಟಿವಿ ಅಳವಡಿಸಲು ತೀರ್ಮಾನಿಸಲಾಗಿದೆ. ಆದರೆ ಏ.1ರಂದು ಕೆಲವು ಕಿಡಿಗೇಡಿಗಳು ಅತಿಕ್ರಮವಾಗಿ ಪ್ರವೇಶಿಸಿ, ವಕ್ಫ್‌ ಆಸ್ತಿಯನ್ನು ಸಾರ್ವಜನಿಕ ಆಸ್ತಿ ಎಂದು ತಪ್ಪು ಮಾಹಿತಿ ಒದಗಿಸಿ ಪ್ರಚೋದನಕಾರಿ ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

[su_note note_color=”#f1f1f1″ text_color=”#000000″ radius=”0″]

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರ ಸಭೆ ನಡೆಸಿದರು. ಈ ಸಂದರ್ಭ ಈದ್ಗಾ ಮೈದಾನ ವಕ್ಫ್‌ ಆಸ್ತಿ ಎಂಬ ದಾಖಲೆಗಳನ್ನು ಒದಗಿಸಿದರು. ಸಭೆ ನಂತರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Edga Ground Fencing Row in Shimoga - DC Gurudatta hegde
ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ.

[su_button target=”blank” style=”flat” background=”#f1f1f1″ color=”#ffffff” size=”12″ center=”yes” icon=”icon: quote-right” icon_color=”#cf0000″][/su_button]

ಮೈದಾನವು ವಕ್ಫ್‌ ಆಸ್ತಿ ಎಂದು ನಮುದಾಗಿರುವ ದಾಖಲೆ ಒದಗಿಸಿದ್ದಾರೆ. ಈ ಕುರಿತು ಪಾಲಿಕೆಯ ದಾಖಲೆಗಳು, ಮೂಲ ದಾಖಲೆಳನ್ನು ಕೂಡ ಪರಿಶೀಲಿಸಬೇಕು. ಆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಈ ಮೈದಾನಕ್ಕೆ ಬ್ಯಾರಿಕೇಡ್‌ ಹಾಕಲಾಗಿರುತ್ತದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ.

– ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

[/su_note]

ಬ್ಯಾರಿಕೇಡ್‌ ತೆರವು, ವಾಹಿವಾಟು ಶುರು

ಸಭೆ ಬಳಿಕ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಈದ್ಗಾ ಮೈದಾನದ ಬಳಿ ತೆರಳಿ ಪರಿಶೀಲಿಸಿದರು. ರಸ್ತೆಗೆ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವು ಮಾಡುವಂತೆ ಸೂಚಿಸಿದರು.

Edga Ground Fencing Row in Shimoga - SP GK Mithun Kumar
ಈದ್ಗಾ ಮೈದಾನದ ಬಳಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಪರಿಶೀಲನೆ.

ನಂತರ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇನ್ನು, ಈ ಭಾಗದಲ್ಲಿ ಕೆಲವು ಮಳಿಗೆಗಳ ಬಾಗಿಲು ತೆರದು ವಹಿವಾಟು ಆರಂಭಿಸಲಾಯಿತು.

Edga Ground Fencing Row in Shimoga
ಸಂಜೆ ವೇಳೆಗೆ ತಿಲಕನಗರ ಮುಖ್ಯ ರಸ್ತೆಯಲ್ಲಿ ಕೆಲವು ಅಂಗಡಿಗಳ ಬಾಗಿಲು ತೆರೆದಿದ್ದವು.

[su_button target=”blank” style=”flat” background=”#fffff” color=”#ffffff” size=”12″ center=”yes” icon=”icon: quote-right” icon_color=”#cf0000″][/su_button]

ಶಿವಮೊಗ್ಗ ನಗರದಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಮೈದಾನದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ಮುಂದಿನ ತೀರ್ಮಾನದ ಬಳಿಕ ತಿಳಿಸಲಾಗುತ್ತದೆ.

– ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ

[su_divider top=”no” divider_color=”#e00000″ link_color=”#ffffff” size=”2″ margin=”10″]

ಈದ್ಗಾ ಮೈದಾನದ ಸುತ್ತಲು ಪೊಲೀಸ್‌ ಬಂದೊಬಸ್ತ್‌ ಮುಂದುವರೆದಿದೆ. ಬೇಲಿ ತೆರವು ಮಾಡಿ ಅಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 2, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment