SHIVAMOGGA LIVE NEWS | 17 ಮಾರ್ಚ್ 2022
ಮುಸ್ಲಿಂ ಒಕ್ಕೂಟಗಳು ರಾಜ್ಯಾದ್ಯಂತ ಬಂದ್’ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸಿದೆ.
ಶಿವಮೊಗ್ಗ ನಗರದಾದ್ಯಂತ ಮುಸ್ಲಿಂ ಸಮುದಾಯದವರ ಒಡೆತನದ ಅಂಗಡಿಗಳು, ಉದ್ಯಮಗಳನ್ನು ಬಂದ್ ಮಾಡಲಾಗಿದೆ.
ಎಲ್ಲೆಲ್ಲಿ ಹೇಗಿದೆ ಬಂದ್?
ಶಿವಮೊಗ್ಗದ ಕೆ.ಆರ್.ಪುರಂ, ಎಂಕೆಕೆ ರಸ್ತೆ, ಕಸ್ತೂರ ಬಾ ರಸ್ತೆ, ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಬೈಪಾಸ್ ರಸ್ತೆ, ಮಂಡ್ಲಿಯಿಂದ ಆಲ್ಕೊಳ ಸಂಪರ್ಕಿಸುವ ಬೈಪಾಸ್ ಸೇರಿದಂತೆ ನಗರಾದ್ಯಂತ ಅಂಗಡಿಗಳು ಬಂದ್ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಬಂದ್
ಮುಸ್ಲಿಂ ಸಂಘಟನೆಗಳು ಕರೆ ನೀಡಿರುವ ಬಂದ್’ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರ ಒಡೆತನದ ಅಂಗಡಿಗಳು, ಉದ್ಯಮಗಳನ್ನು ಬಂದ್ ಮಾಡಲಾಗಿದೆ. ಶಿರಾಳಕೊಪ್ಪ ಮುಖ್ಯ ರಸ್ತೆ ಬಹುತೇಕ ಬಂದ್ ಆಗಿದೆ. ಉಳಿದಂತೆ ಜಿಲ್ಲೆಯಾದ್ಯಂತ ಇದೆ ಪರಿಸ್ಥಿತಿ ಇದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200