ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021
ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯ ನಾಗರೀಕರ ಪರವಾಗಿ ನಮ್ಮೊಲುಮೆ ಹೆಸರಿನಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ಯಡಿಯೂರಪ್ಪ ಅಭಿನಂದನಾ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುದ್ರೇಗೌಡ ಅವರು, ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ನಮ್ಮೊಲುಮೆ ಕಾರ್ಯಕ್ರಮ ನಡೆಯಲಿದೆ ಎಂದರು.

ಸಂಜೆ ಭಾವಾಭಿನಂದನಾ
ಯಡಿಯೂರಪ್ಪ ಅವರಿಗೆ ಸನ್ಮಾನ ಮುಗಿದ ಬಳಿಕ ಭಾವಾಭಿನಂದನ ಕಾರ್ಯಕ್ರಮ ನಡೆಯಲಿದೆ. ಕಿರುತೆರೆಯ ನಿರೂಪಕಿ ಅನುಶ್ರೀ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಗಾಯಕರಾದ ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬಂದವರಿಗೆ ಮಾಸ್ಕ್, ಲಡ್ಡು
ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಭಾಗಿ ಆಗಬಹುದು ಎಂಬ ನಿರೀಕ್ಷೆ ಇದೆ. ಈ ಸಂಖ್ಯೆ ಹೆಚ್ಚಳ ಆಗುವ ಸಾದ್ಯತೆಯು ಇದೆ. ಹಾಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗು ಲಡ್ಡು ಮತ್ತು ಮಾಸ್ಕ್ ವಿತರಣೆ ಮಾಡಲಾಗುತ್ತದೆ ಎಂದು ರುದ್ರೇಗೌಡ ತಿಳಿಸಿದರು.
ಮಾರ್ಚ್ 1ರಂದು ಸಂಜೆ 6 ಗಂಟೆಗೆ ಅದೇ ವೇದಿಕೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ವತಿಯಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದರು.
ಅರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಪ್ರಮುಖರಾದ ಲಕ್ಷ್ಮೀನಾರಾಯಣ ಕಾಶಿ, ಸುಭಾಷ್, ಬಳ್ಳೆಕೆರೆ ಸಂತೋಷ್, ರೈಲ್ವೆ ಸಲಹಾ ಸಮಿತಿ ಸದಸ್ಯ ಮಾಲ್ತೇಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






