ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’ ಮ್ಯಾರಥಾನ್‌ಗೆ ಚಾಲನೆ, ಏನಿದು ಮ್ಯಾರಥಾನ್? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MARCH 2021

ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ನಂಜಪ್ಪ 3ಕೆ ರನ್‍ಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಿದರು. ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗದಿಂದ 3ಕೆ ರನ್ ಆರಂಭವಾಗಿದೆ.

ನಂಜಪ್ಪ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಸೇರಿ ಸುಮಾರು 200 ಮಂದಿ ‘ನಂಜಪ್ಪ 3ಕೆ ರನ್‍’ನಲ್ಲಿ ಭಾಗವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಈ ಮ್ಯಾರಥಾನ್ ನಡೆಯಲಿದೆ.

ಇದನ್ನೂ ಓದಿ | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ ಆಸ್ಪತ್ರೆಯಿಂದ ಸೈಕಲ್ ಜಾಥಾ ಆರಂಭ, ಸಮಾಲೋಚನ ಸೌಲಭ್ಯ

‘ನಂಜಪ್ಪ 3ಕೆ ರನ್’ ಉದ್ಘಾಟನೆಗೂ ಮೊದಲು ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಪ್ರತಿಯೊಬ್ಬರಿಗೂ ದೇಹದ ಅಂಗಾಂಗಗಳ ಆರೋಗ್ಯದ ಕುರಿತು ಅರಿವು ಇರಬೇಕು. ಕಿಡ್ನಿಯ ಆರೋಗ್ಯದ ಕುರಿತು ಕೆಲವು ವರ್ಷದ ಹಿಂದಿನವರೆಗೂ ಇಷ್ಟೊಂದು ಜಾಗೃತಿ ಇರಲಿಲ್ಲ. ಈಗ ಕಿಡ್ನಿ ವಿಚಾರದಲ್ಲಿ ಹೆಚ್ಚು ತಿಳಿದುಕೊಳ್ಳುತ್ತಿದ್ದೇವೆ. ಅದರ ಆರೋಗ್ಯದ ಕುರಿತು ಎಲ್ಲರೂ ನಿಗಾ ವಹಿಸಬೇಕು ಎಂದರು.

ಡಯಾಲಿಸಿಸ್ ಘಟಕಕ್ಕೆ 25 ವರ್ಷ

1995ರ ಫೆ. 23ರಂದು ನಂಜಪ್ಪ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಸ್ಥಾಪಿಸಿದ್ದು, ಅಂದಿನಿಂದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಉತ್ತರಕನ್ನಡ ಜಿಲ್ಲೆಗಳ ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ಡಯಾಲಿಸಿಸ್‌ ಉಪಕರಣಗಳೊಂದಿಗೆ ದಿನದಲ್ಲಿ 8 ರೋಗಿಗಳಿಗೆ ಡಯಾಲಿಸಿಸ್‌ ಮಾಡಲು ಶುರುವಾದ ಚೊಚ್ಚಲು ಪಯಣ ಪ್ರಸ್ತುತ 14 ಅತಿ ಉತ್ತಮ ಹಾಗೂ ಅತ್ಯಾಧುನಿಕ ಉಪಕರಣಗಳ ಮುಖಾಂತರ ತಿಂಗಳಿಗೆ ಒಂದು ಸಾವಿರಕ್ಕೂ ಅಧಿಕ ಮಂದಿಗೆ ಡಯಾಲಿಸಿಸ್‌ ಚಿಕಿತ್ಸೆ ನೀಡಲಾಗುತ್ತಿದೆ.

159846847 1346804192347664 2554293354402594875 o.jpg? nc cat=108&ccb=1 3& nc sid=730e14& nc ohc=4SIGfKDlHbcAX8fRr2n& nc oc=AQlr4S1 NH4s1knXlv9T5eriZhLVbtDqo5zVLmrYnz0PEgqZoDu4zsu4xmjDbPBS7p8HRoOAi4OrRmTLJTmcmUF8& nc ht=scontent.fixe1 1

ನಂಜಪ್ಪ ಆಸ್ಪತ್ರೆ ಮಲೆನಾಡಿನಲ್ಲಿ ಮೊದಲ ಬಾರಿಗೆ ಹಿಮೋಡಯಾಲಿಸಿಸ್, ಥೆರಪುಟಿಕ್ ಪ್ಲಾಸ್ಕಾಪೆರಿಸಿಸ್ ಹಾಗೂ ಕಂಟಿನ್ಯೂಸ್ ಆಂಬ್ಯುಲೇಟರಿ ಪೆರಿಟೋನಿಯಲ್‌ ಡಯಾಲಿಸಿಸ್ (ಸಿಎಪಿಡಿ)ಯನ್ನು ಪರಿಚಯಿಸಿದೆ. ಇತ್ತೀಚಿನ ಕಂಟಿನ್ಯೂಸ್ ರೀನಲ್ ರಿಪ್ಲೇಸ್ಮೆಂಟ್ ಥೆರಪಿ ಮಷಿನ್ ಪ್ರಿಸ್ಮಪ್ಲೆಕ್ಸ್ (ಬ್ಯಾಕ್ಟರ್) ಸೇರ್ಪಡೆ ಮಾಡಿದ ಹೆಗ್ಗಳಿಕೆಯನ್ನೂ ಹೊಂದಿದೆ

ಪ್ರತಿ ವರ್ಷ 3ಕೆ ರನ್

ನಂಜಪ್ಪ ಆಸ್ಪತ್ರೆ ವತಿಯಿಂದ ಇನ್ಮುಂದೆ ಪ್ರತಿ ವರ್ಷ ‘ನಂಜಪ್ಪ  3ಕೆ ರನ್’ ಆಯೋಜಿಸಲಾಗುತ್ತದೆ. ಕಿಡ್ನಿ ಮತ್ತು ಅದರ ಆರೋಗ್ಯ ಕುರಿತು ಜಾಗೃತಿಗಾಗಿ ಈ ರನ್ ಆಯೋಜನೆ ಮಾಡಲಾಗುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2021

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment