ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2023
SHIMOGA : ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ವಿಶ್ವನಾಯಕ (World Leader). ಜಾಗತಿಕ ಸುಳ್ಳಿನ ಸ್ಪರ್ಧೆ ನಡೆಸಿದರೆ ಪ್ರಧಾನಿ ನರೇಂದ್ರ ಮೋದಿಗೆ ಪ್ರಥಮ, ಅಮಿತ್ ಷಾ ಅವರಿಗೆ ದ್ವಿತೀಯ ಸ್ಥಾನ ದೊರೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಬಿಜೆಪಿಯವರು ಸುಳ್ಳನ್ನಷ್ಟೆ ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಹಿಂದೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಹಾಗಿದ್ದೂ ಬಿಜೆಪಿ ಮುಖಂಡರು ನಮ್ಮ ಸರ್ಕಾರದ ವಿರುದ್ಧ ಅವಹೇಳನ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹೈಕಮಾಂಡ್ ಬುಲಾವ್ ನೆಪದಲ್ಲಿ ದೆಹಲಿಗೆ
ಆರು ತಿಂಗಳಾದರು ಬಿಜೆಪಿಯವರು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ವಿಫಲವಾಗಿದ್ದಾರೆ. ಬಿಜೆಪಿಯಲ್ಲಿ ಹಲವು ಗುಂಪುಗಳಿರುವುದು ಇದಕ್ಕೆ ಕಾರಣ. ಯಡಿಯೂರಪ್ಪ ಅವರನ್ನು ಈತನಕ ನಿರ್ಲಕ್ಷ್ಯ ಮಾಡಲಾಗಿತ್ತು. ಈಗ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹೈ ಕಮಾಂಡ್ ಬುಲಾವ್ ನೆಪದಲ್ಲಿ ಬಿಜೆಪಿ ಮುಖಂಡರು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದಾಗಿದೆ. ಈಶ್ವರಪ್ಪ ಅವರು ದೆಹಲಿಗೆ ತೆರಳಿದ್ದು ಮುಖಂಡರಿಗೆ ಮನವಿ ಸಲ್ಲಿಸುವಂತೆ ನಿಂತಿದ್ದಾರೆ ಫೋಟೊ ಹೊರ ಬಂದಿದೆ ಎಂದರು.
ಬಿಜೆಪಿ ಸರ್ಕಾರವಿದ್ದಾಗಲೆ ಪರಿಹಾರ ತರಲಿಲ್ಲ
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಖಜಾನೆ ಲೂಟಿ ಮಾಡಿದ್ದಾರೆ. ನಿಗದಿಗಿಂತಲೂ ಹೆಚ್ಚಿನ ಮೊತ್ತದ ಟೆಂಡರ್ ಕರೆದು ಹಣ ಖಾಲಿ ಮಾಡಿದ್ದಾರೆ. ಈಗ ಬರ ಪರಿಹಾರದ ಕುರಿತು ಸರ್ಕಾರದ ವಿರುದ್ಧ ಟೀಕಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗಲೆ ಕೇಂದ್ರದಿಂದ ಬರ ಪರಿಹಾರ ತರುವಲ್ಲಿ ವಿಫಲವಾಗಿದ್ದರು. ಈಗ ಯಡಿಯೂರಪ್ಪ ಅವರು ಬರ ಅಧ್ಯಯನ ಪ್ರವಾಸ ಮಾಡುವುದಾಗಿ ತಿಳಿಸುತ್ತಿದ್ದಾರೆ ಎಂದು ಸುಂದರೇಶ್ ಟೀಕಿಸಿದರು.
ದೀಪಾವಳಿ ಬಳಿಕ ಸಂಸತ್ಗೆ ಸಿದ್ಧತೆ
ದೀಪಾವಳ ಹಬ್ಬದ ನಂತರ ಲೋಕಸಭೆ ಚನಾವಣೆಗೆ ಸಿದ್ಧತೆ ಆರಂಭಿಸಲಾಗುತ್ತದೆ. ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗುತ್ತದೆ. ವಿಧಾನಸಭೆ ಕ್ಷೇತ್ರವಾರು ಕಾರ್ಯಕರ್ತರ ಸಭೆ ಆಯೋಜಿಲಾಗುತ್ತದೆ. ಪಕ್ಷದಲ್ಲಿ ತಮ್ಮನ್ನು ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ನೀಡಿದರು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ತಿಳಿಸಿದರು.
ಇದನ್ನೂ ಓದಿ – ವಿದೇಶದಲ್ಲಿ ಉನ್ನತ ಶಿಕ್ಷಣ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರು ಅರ್ಜಿ ಸಲ್ಲಿಸಬಹುದು?
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















