ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 16 JUNE 2023
SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ (National Education Society) ಅಮೃತ ಮಹೋತ್ಸವದ ಅಂಗವಾಗಿ ಜೂ.20 ಮತ್ತು 21ರಂದು ಎನ್ಇಎಸ್ ಹಬ್ಬ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ, ವಸ್ತು ಪ್ರದರ್ಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ವ್ಯಕ್ತಿ ಬೆಳೆದಂತೆ ದುರ್ಬಲನಾಗುತ್ತಾನೆ. ಆದರೆ ವಯಸ್ಸಾದಂತೆ ಸಂಸ್ಥೆಗಳು ದೃಢವಾಗುತ್ತವೆ. ಅದೆ ರೀತಿ ಎನ್ಇಎಸ್ ಸಂಸ್ಥೆ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ ಎಂದರು.
ಏನೇನೆಲ್ಲ ಕಾರ್ಯಕ್ರಮ ಇರಲಿದೆ?
ಎನ್ಇಎಸ್ ಹಬ್ಬದ (National Education Society) ಉದ್ಘಾಟನಾ ಸಮಾರಂಭವು ಜೂ.20ರಂದು ಬೆಳಗ್ಗೆ 10 ಗಂಟೆಗೆ ಎನ್ಇಎಸ್ ಮೈದಾನದಲ್ಲಿ ನಡೆಯಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಹಾಸ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಇದನ್ನೂ ಓದಿ – ಸಂಸದ ರಾಘವೇಂದ್ರ ಸೇರಿ ಹಲವರು ವಶಕ್ಕೆ | ಚಾರ್ಲಿಗಾಗಿ ಬಹುಮಾನ | ಶಿವಮೊಗ್ಗ ನಗರದ 10 ಫಟಾಫಟ್ ಸುದ್ದಿ
ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಸಂದರ್ಭ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ನಟ ವಸಿಷ್ಠ ಸಿಂಹ ಅವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿರುತ್ತಾರೆ.
[su_divider text=” ಜಾಹೀರಾತು” divider_color=”#000000″ link_color=”#000000″ size=”2″ margin=”5″]

ಜೂ.21ರಂದು ಬೆಳಗ್ಗೆ 10ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಅಮೃತ ನಡಿಗೆ, ಯೋಗ
[su_quote cite=”ಎಸ್.ಎನ್.ನಾಗರಾಜ್, ಎನ್ಇಎಸ್ ಕಾರ್ಯದರ್ಶಿ“]ಜೂ.17ರಂದು ಅಮೃತ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಎನ್ಇಎಸ್ ಶಿಕ್ಷಣ ಸಂಸ್ಥೆಗಳ 18 ಸಾವಿರ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ 6 ಕಡೆಯಿಂದ ನಡಿಗೆ ಆರಂಭವಾಗಲಿದೆ. ಎಲ್ಲರು ಕೊನೆಗೆ ಎನ್ಇಎಸ್ ಮೈದಾನಕ್ಕೆ ತಲುಪಲಿದ್ದಾರೆ. ಅಲ್ಲಿ ಹೀಲಿಯಂ ಬಲೂನ್ ಹಾರಿಸಲಾಗುತ್ತದೆ.[/su_quote]
[su_quote cite=”ಡಾ. ಪಿ.ನಾರಾಯಣ, ಎನ್ಇಎಸ್ ಸಹ ಕಾರ್ಯದರ್ಶಿ“]ಜೂ.21 ವಿಶ್ವ ಯೋಗ ದಿನ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎನ್ಇಎಸ್ ಮೈದಾನದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಯೋಗ ನಡೆಯಲಿದೆ. ಬೆಳಗ್ಗೆ 6.30ರಿಂದ ದೊಡ್ಡ ಸಂಖ್ಯೆಯಲ್ಲಿ ಯೋಗಪಟುಗಳು ಯೋಗ ಮಾಡಲಿದ್ದಾರೆ.[/su_quote]
ಗ್ರಾಮೀಣ ಭಾಗಕ್ಕೆ ಅಧುನಿಕ ಶಿಕ್ಷಣ

[su_quote cite=”ಜಿ.ಎಸ್.ನಾರಾಯಣ ರಾವ್, ಎನ್ಇಎಸ್ ಅಧ್ಯಕ್ಷ“]ಅಮೃತ ಮಹೋತ್ಸವದ ಹಿನ್ನೆಲೆ 2.50 ಕೋಟಿ ರೂ. ವೆಚ್ಚದಲ್ಲಿ ಕೋಣಂದೂರಿನಲ್ಲಿ ಆಧುನಿಕ ಶಾಲಾ ಕಟ್ಟಡ ನಿರ್ಮಿಸಲಾಗಿದೆ. ಜೂ.26ರಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಗ್ರಾಮೀಣ ಭಾಗಕ್ಕೂ ಆಧುನಿಕ ಶಿಕ್ಷಣ ವಿಸ್ತರಿಸುವ ಉದ್ದೇಶಕ್ಕೆ ಈ ಕಟ್ಟಡ ನಿರ್ಮಿಸಲಾಗಿದೆ.[/su_quote]
ಉಪಾಧ್ಯಕ್ಷ ಸಿ.ಆರ್.ನಾಗರಾಜ್, ಡಿ.ಜಿ.ರಮೇಶ್, ಅಶ್ವತ್ಥ ನಾರಾಯಣ ಶೆಟ್ಟಿ, ಜಿ.ಎನ್.ಸುಧೀರ್, ಶಿವಕುಮಾರ್, ರಾಮಚಂದ್ರ ಮೂರ್ತಿ, ಅನಂತ ದತ್ತ, ಸೀತಾಲಕ್ಷ್ಮಿ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಅಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ನೃಪತುಂಗ ಸುದ್ದಿಗೋಷ್ಠಿಯಲ್ಲಿ ಇದ್ದರು.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















