ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020
ಶಿವಮೊಗ್ಗ ನಗರದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ದೇವಸ್ಥಾನವೊಂದರಲ್ಲಿ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ನವುಲೆಯ ಸಂಕಟ ವಿಮೋಚನ ಶ್ರೀ ಶನೈಶ್ಚರ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 26ರಿಂದ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ ಎಂದು ದೇವಸ್ಥಾನದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ವೈರಸನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನಕ್ಕೆ ಭಕ್ತರು ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ದರ್ಶನವನ್ನು ನಿರ್ಬಂಧಿಸಲಾಗಿದೆ. ಆದರೆ ದೇವಸ್ಥಾನದಲ್ಲಿ ನಿತ್ಯ ಪೂಜಾ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ವ್ಯವಸ್ಥಾಪಕರು, ಪ್ರಧಾನ ಅರ್ಚಕರು ಹಾಗೂ ದೈನಂದಿನ ಕಾರ್ಯಗಳನ್ನು ಮಾಡುವವರಿಗೆ ದೇವಸ್ಥಾನದೊಳಗೆ ಪ್ರವೇಶ ಇರಲಿದೆ.
ಕೊರೋನಾ ವೈರಸ್ ತಹಬಂದಿಗೆ ಬರುವವರೆಗೆ ಈ ನಿರ್ಬಂಧ ಮುಂದುವರೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಅವರು ಕೋರಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





