ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ವ್ಯಾನಿಟಿ ಬ್ಯಾಗ್‌ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 AUGUST 2023

SHIMOGA : ಬಸ್‌ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ (VANITY BAG) ನೆಕ್ಲೇಸ್‌ ಕಳ್ಳತನ ಮಾಡಲಾಗಿದೆ. ನಗರದ ಕೆಎಸ್‌ಆರ್‌ಟಿಸಿ ಬಸ್‌ (KSRTC BUS) ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನ್ಯಾಮತಿಯ ನಿಂಗಮ್ಮ ಎಂಬುವವರು ತಮ್ಮ ಮೊಮ್ಮಗಳ ಹುಟ್ಟುಹಬ್ಬಕ್ಕೆ ಖರೀದಿಸಿದ್ದ ಚಿನ್ನದ ನೆಕ್ಲೇಸ್‌ (NECKLACE) ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಹೇಗಾಯ್ತು ಘಟನೆ?

ನಿಂಗಮ್ಮ ಗಾಂಧಿ ಬಜಾರ್‌ನಲ್ಲಿರುವ (GANDHI BAZAAR) ಆಭರಣದ ಅಂಗಡಿಯೊಂದರಲ್ಲಿ 46 ಸಾವಿರ ರೂ. ಮೌಲ್ಯದ ನೆಕ್ಲೇಸ್‌ ಖರೀದಿಸಿದ್ದರು. ಅದನ್ನು ತಮ್ಮ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದರು. ಊರಿಗೆ ಹೋಗಲು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದು ಬಹು ಹೊತ್ತು ಕಾದರು ಬಸ್‌ ಬರಲಿಲ್ಲ. ಶಿಕಾರಿಪುರದ (SHIKARIPURA) ಬಸ್‌ ಬಂದಿದ್ದು ನಿಂಗಮ್ಮ ಅದನ್ನು ಹತ್ತಿದ್ದಾರೆ. ಬಸ್‌ ಹತ್ತುವಾಗ ರಶ್‌ ಇತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸೀಟ್‌ ಹಿಡಿದು ಕುಳಿತಿದ್ದ ನಿಂಗಮ್ಮ ಅವರು ತಮ್ಮ ವ್ಯಾನಿಟಿ ಬ್ಯಾಗ್‌ ಜಿಪ್‌ ತೆಗೆದಿರುವುದನ್ನು ಗಮನಿಸಿದ್ದಾರೆ. ಒಳಗೆ ಪರಿಶೀಲಿಸಿದಾಗ ನೆಕ್ಲೇಸ್‌ ಇದ್ದ ಬಾಕ್ಸ್‌ ನಾಪತ್ತೆಯಾಗಿತ್ತು. ಬಸ್‌ ಹತ್ತುವಾಗ ಕಳ್ಳರು ನೆಕ್ಲೇಸ್‌ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಮ್ಮ ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ

ಇಂತಹ ಪ್ರಕರಣ ಇದೇ ಮೊದಲಲ್ಲ

ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನ ಪ್ರಕರಣ ಇದೆ ಮೊದಲಲ್ಲ. ಬಸ್‌ ಹತ್ತುವ ವೇಳೆ ಹೆಚ್ಚು ಜನ ಸಂದಣಿ ಇರುವಾಗ ಪ್ರಯಾಣಿಕರ ಸೋಗಿನಲ್ಲಿರುವ ಕಳ್ಳರು ವ್ಯಾನಿಟಿ ಬ್ಯಾಗಿನ ಜಿಪ್‌ ತೆಗೆದು ನಗದು, ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಕೆಲವೆ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗುತ್ತಾರೆ. ಇನ್ನು, ಅಂಗಡಿಯಲ್ಲಿ ನೀರು, ತಿಂಡಿ ತಿನಿಸು ಖರೀದಿ, ಶೌಚಾಲಯಕ್ಕೆ ಹೋಗಿ ಮರಳುವಷ್ಟರಲ್ಲಿ ಬಸ್ಸಿನ ಸೀಟ್‌ ಮೇಲೆ ಇಟ್ಟಿದ್ದ ಬ್ಯಾಗ್‌ಗಳನ್ನು ಕಳವು ಮಾಡಿದ ಉದಾಹರಣೆಗಳಿವೆ. ಪ್ರಯಾಣಿಕರು ಬಸ್‌ ಹತ್ತುವಾಗ, ಬಸ್ಸಿನಲ್ಲಿ ಬ್ಯಾಗ್‌ ಇರಿಸಿ ಇಳಿಯುವಾಗ ಮುಂಜಾಗ್ರತೆ ವಹಿಸಬೇಕಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment