ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 AUGUST 2023
SHIMOGA : ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ (VANITY BAG) ನೆಕ್ಲೇಸ್ ಕಳ್ಳತನ ಮಾಡಲಾಗಿದೆ. ನಗರದ ಕೆಎಸ್ಆರ್ಟಿಸಿ ಬಸ್ (KSRTC BUS) ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.
ನ್ಯಾಮತಿಯ ನಿಂಗಮ್ಮ ಎಂಬುವವರು ತಮ್ಮ ಮೊಮ್ಮಗಳ ಹುಟ್ಟುಹಬ್ಬಕ್ಕೆ ಖರೀದಿಸಿದ್ದ ಚಿನ್ನದ ನೆಕ್ಲೇಸ್ (NECKLACE) ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಹೇಗಾಯ್ತು ಘಟನೆ?
ನಿಂಗಮ್ಮ ಗಾಂಧಿ ಬಜಾರ್ನಲ್ಲಿರುವ (GANDHI BAZAAR) ಆಭರಣದ ಅಂಗಡಿಯೊಂದರಲ್ಲಿ 46 ಸಾವಿರ ರೂ. ಮೌಲ್ಯದ ನೆಕ್ಲೇಸ್ ಖರೀದಿಸಿದ್ದರು. ಅದನ್ನು ತಮ್ಮ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟಿದ್ದರು. ಊರಿಗೆ ಹೋಗಲು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಬಹು ಹೊತ್ತು ಕಾದರು ಬಸ್ ಬರಲಿಲ್ಲ. ಶಿಕಾರಿಪುರದ (SHIKARIPURA) ಬಸ್ ಬಂದಿದ್ದು ನಿಂಗಮ್ಮ ಅದನ್ನು ಹತ್ತಿದ್ದಾರೆ. ಬಸ್ ಹತ್ತುವಾಗ ರಶ್ ಇತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸೀಟ್ ಹಿಡಿದು ಕುಳಿತಿದ್ದ ನಿಂಗಮ್ಮ ಅವರು ತಮ್ಮ ವ್ಯಾನಿಟಿ ಬ್ಯಾಗ್ ಜಿಪ್ ತೆಗೆದಿರುವುದನ್ನು ಗಮನಿಸಿದ್ದಾರೆ. ಒಳಗೆ ಪರಿಶೀಲಿಸಿದಾಗ ನೆಕ್ಲೇಸ್ ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಬಸ್ ಹತ್ತುವಾಗ ಕಳ್ಳರು ನೆಕ್ಲೇಸ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಮ್ಮ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ
ಇಂತಹ ಪ್ರಕರಣ ಇದೇ ಮೊದಲಲ್ಲ
ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಕಳ್ಳತನ ಪ್ರಕರಣ ಇದೆ ಮೊದಲಲ್ಲ. ಬಸ್ ಹತ್ತುವ ವೇಳೆ ಹೆಚ್ಚು ಜನ ಸಂದಣಿ ಇರುವಾಗ ಪ್ರಯಾಣಿಕರ ಸೋಗಿನಲ್ಲಿರುವ ಕಳ್ಳರು ವ್ಯಾನಿಟಿ ಬ್ಯಾಗಿನ ಜಿಪ್ ತೆಗೆದು ನಗದು, ಚಿನ್ನಾಭರಣ ಕಳ್ಳತನ ಮಾಡುತ್ತಾರೆ. ಕೆಲವೆ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗುತ್ತಾರೆ. ಇನ್ನು, ಅಂಗಡಿಯಲ್ಲಿ ನೀರು, ತಿಂಡಿ ತಿನಿಸು ಖರೀದಿ, ಶೌಚಾಲಯಕ್ಕೆ ಹೋಗಿ ಮರಳುವಷ್ಟರಲ್ಲಿ ಬಸ್ಸಿನ ಸೀಟ್ ಮೇಲೆ ಇಟ್ಟಿದ್ದ ಬ್ಯಾಗ್ಗಳನ್ನು ಕಳವು ಮಾಡಿದ ಉದಾಹರಣೆಗಳಿವೆ. ಪ್ರಯಾಣಿಕರು ಬಸ್ ಹತ್ತುವಾಗ, ಬಸ್ಸಿನಲ್ಲಿ ಬ್ಯಾಗ್ ಇರಿಸಿ ಇಳಿಯುವಾಗ ಮುಂಜಾಗ್ರತೆ ವಹಿಸಬೇಕಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















