SHIVAMOGGA LIVE NEWS | 4 DECEMBER 2024
ಶಿವಮೊಗ್ಗ : ಷೇರುದಾರರಿಗೆ ಕಾರ್ಪೊರೇಟ್ ಬ್ಯಾಂಕ್ ಮಾದರಿ ಸೇವೆ ಒದಗಿಸಲು ಸಿದ್ಧವಾಗಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (DCC BANK) ಮೂರು ಹೊಸ ಶಾಖೆಗಳನ್ನು ತೆರೆಯುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ ತಿಳಿಸಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಡಿ.6ರಂದು ಸೊರಬ ತಾಲೂಕು ಜಡೆ ಗ್ರಾಮದಲ್ಲಿ ಬ್ಯಾಂಕ್ನ ಶಾಖೆ ಆರಂಭಿಸಲಾಗುತ್ತಿದೆ. ಡಿ.12ರಂದು ಶಿಕಾರಿಪುರ ತಾಲೂಕು ಸುಣ್ಣದಕೊಪ್ಪ, ಡಿ.18ರಂದು ಭದ್ರಾವತಿ ತಾಲೂಕು ಕ್ಲಲಿಹಾಳ್ನಲ್ಲಿ ಶಾಖೆ ಆರಂಭಿಸಲಾಗುತ್ತಿದೆ. ಇದರಿಂದ ಡಿಸಿಸಿ ಬ್ಯಾಂಕ್ನ ಒಟ್ಟು ಶಾಖೆಗಳ ಸಂಖ್ಯೆ 31ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದರು.
22 ಹೊಸ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ಗೆ ಅನುಮತಿ ಕೇಳಲಾಗಿದೆ. ಈಗ ಮೂರು ಶಾಖೆಗಳ ಆರಂಭಕ್ಕೆ ಅನುಮತಿ ಸಿಕ್ಕಿದೆ. 2025ರಲ್ಲಿ 19 ಶಾಖೆಗಳ ಆರಂಭಕ್ಕೆ ಅನುಮತಿ ದೊರೆಯುವ ನಿರೀಕ್ಷೆ ಇದೆ.
– ಡಾ. ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಇನ್ನು, ನಬಾರ್ಡ್ ಪುನರ್ಧನ ಸೌಲಭ್ಯ ಕಡಿತಗೊಂಡಿದ್ದರು ಡಿಸಿಸಿ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1.20 ಲಕ್ಷ ರೈತರಿಗೆ 1200 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ನೀಡುವ ಗುರಿ ಹೊಂದಿದೆ. ಈಗಾಗಲೇ 1,05,640 ರೈತರಿಗೆ 1180.12 ಕೋಟಿ ರೂ. ಸಾಲ ನೀಡಲಾಗಿದೆ. ಶೇ.3ರ ಬಡ್ಡಿ ದರದಲ್ಲಿ 845 ರೈತರಿಗೆ 64.12 ಕೋಟಿ ರೂ. ಮಧ್ಯಮಾವಧಿ ಕೃಷಿ ಸಾಲ ನೀಡಲಾಗಿದೆ ಎಂದರು.
3255 ಸ್ವ ಸಹಾಯ ಸಂಘಗಳಿಗೆ 84.49 ಕೋಟಿ ರೂ. ಸಾಲ ವಿತರಿಸಲಾಗಿದೆ. ಪಶು ಸಂಗೋಪನೆಗಾಗಿ 3050 ಸದಸ್ಯರಿಗೆ 6.63 ಕೋಟಿ ರೂ. ಸಾಲ ನೀಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕರಾದ ಮಹಾಲಿಂಗಶಾಸ್ತ್ರಿ, ಸುದೀರ್, ದುಗ್ಗಪ್ಪಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200