ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022
ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಸಚಿವ ಡಾ.ನಾರಾಯಣಗೌಡ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಅದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದು ಪಕ್ಷದ ಮುಖಂಡರಲ್ಲಿ ಚರ್ಚೆಗೆ ಕಾರಣವಾಗಿದೆ.
ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಅಲ್ಲದೆ ಜಿಲ್ಲೆಯ ಅಭಿವೃದ್ಧಿ ಕುರಿತು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು.
ಉಸ್ತುವಾರಿಯಾದ ಬಳಿಕ ಜಿಲ್ಲೆಗೆ ಭೇಟಿ
ಇನ್ನು, ಸಚಿವ ಡಾ.ನಾರಾಯಣಗೌಡ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತ ಮೇಲೆ ಇದು ಅವರ ಮೊದಲ ಭೇಟಿಯಗಿದೆ. ಇವತ್ತು ರಾತ್ರಿ 8 ಗಂಟೆ ಹೊತ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಶಿವಮೊಗ್ಗಕ್ಕೆ ತಲುಪಲಿದ್ದಾರೆ.
ಜ.26ರಂದು ಡಿಎಆರ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






