| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 22 FEBRURARY 2023
SHIMOGA : ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಮತ್ತು ರೈಲ್ವೆ ನಿಲ್ದಾಣಕ್ಕೆ (Railway Station) ಕೆಳದಿ ಶಿವಪ್ಪನಾಯಕ ಅವರು ಹೆಸರು ಇಡಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
![]()
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಈ ಮೊದಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಇಡಲು ಚರ್ಚೆ ನಡೆದಿತ್ತು. ಸಂಪುಟ ಸಭೆಯಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ಸ್ವತಃ ಯಡಿಯೂರಪ್ಪ ಅವರೆ ತಮ್ಮ ಹೆಸರು ಇಡುವುದು ಬೇಡ ಎಂದು ನಿರಾಕರಿಸಿದ್ದಾರೆ. ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಲು ಸಲಹೆ ನೀಡಿದ್ದರು. ಈ ಸಲಹೆಗೆ ಮನ್ನಣೆ ನೀಡಿದ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕುವೆಂಪು ಹೆಸರನ್ನು ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್, ಏನಿದು?
![]()
ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ (Railway Station) ಕೆಳದಿ ಶಿವಪ್ಪನಾಯಕ ಅವರ ಹೆಸರು ಇಡಲು ಸಹ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಕುವೆಂಪು ಮತ್ತು ಕೆಳದಿ ಅರಸರು ಜಿಲ್ಲೆಯ ಎರಡು ಕಣ್ಣುಗಳಿದ್ದಂತೆ. ಶಿವಪ್ಪ ನಾಯಕರು ಶಿಸ್ತಿಗೆ ಹೆಸರಾದವರು. ಕಂದಾಯ ವ್ಯವಸ್ಥೆಯನ್ನು ಉತ್ತಮಗೊಳಿಸಿ ಉತ್ತಮ ಆಡಳಿತ ನೀಡಿದವರು. ಕುವೆಂಪು ರಾಷ್ಟ್ರ ಕವಿಗಳು. ವಿಶ್ವಮಾನವ ಪ್ರಜ್ಞೆ ಬೆಳೆಸಿದವರು. ಜ್ಞಾನದ ಶಿಖರವಾಗಿದ್ದಾರೆ. ಈ ಇಬ್ಬರ ಹೆಸರನ್ನು ಅಧಿಕೃತಗೊಳಿಸಿರುವುದು ಸ್ವಾಗತದ ವಿಷಯ. ಸಾಧಕರನ್ನ ಜಾತಿಗೆ ಸೀಮಿತಗೊಳಿಸದೆ ಈ ಹೆಸರು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದು ಸಾಮಾನ್ಯ ವಿಮಾನವಲ್ಲ, ‘ಇಂಡಿಯಾ 1’, ಇದರ ವಿಶೇಷತೆ ಏನು ಗೊತ್ತಾ?

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()