SHIVAMOGGA LIVE NEWS | 12 JULY 2024
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ (DCC BANK) ಅಧ್ಯಕ್ಷರಾಗಿ ನಿರೀಕ್ಷೆಯಂತೆ ಆರ್.ಎಂ.ಮಂಜುನಾಥ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಕೆ.ಮರಿಯಪ್ಪ ಕೂಡ ಅವಿರೋಧ ಆಯ್ಕೆಯಾದರು.
ಈ ಬಾರಿ ಡಿಸಿಸಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ರೋಚಕತೆ ಕಾಣದೆ ಅಂತ್ಯವಾಗಿದೆ. ಆಡಳಿತ ಮಂಡಳಿಯ 13 ಜನರ ಪೈಕಿ 11 ಮಂದಿ ಮಂಜುನಾಥ ಗೌಡ ಅವರ ಬೆಂಬಲಿಗರೇ ಇರುವುದರಿಂದ ಸಹಜವಾಗಿ ಅವರ ಗೆಲುವಿಗೆ ಅನುಕೂಲವಾಗಿದೆ.
ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ನಿರ್ದೇಶಕರು ನಾಮಪತ್ರ ಸಲ್ಲಿಸದಿರುವುದರಿಂದ ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಿಸಿದರು. ಈ ಬಾರಿ ಅಧ್ಯಕ್ಷ ಸ್ಥಾನಕ್ಕೇರುವ ಮೂಲಕ 11ನೇ ಬಾರಿ ಅಧ್ಯಕ್ಷರಾದ ದಾಖಲೆ ಆರ್.ಎಂ.ಮಂಜುನಾಥ ಗೌಡರ ಪಾಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಅನಿರೀಕ್ಷಿತವಾಗಿ ಎಸ್.ಕೆ.ಮರಿಯಪ್ಪ ಆಯ್ಕೆಯಾಗಿದ್ದಾರೆ. ಹಿಂದೆ ಅನೇಕ ಸಹಕಾರ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದಾರೆ. ದೀರ್ಘಕಾಲ ಶಿವಮೊಗ್ಗ ನಗರಸಭೆ, ಬಳಿಕ ಪಾಲಿಕೆ ಸದಸ್ಯರಾಗಿ, ಮೇಯರ್ ಆಗಿ ರಾಜಕೀಯದಲ್ಲೂ ಗಮನ ಸೆಳೆದಿದ್ದರು. ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಇಬ್ಬರನ್ನೂ ಸನ್ಮಾನಿಸಿದರು.
ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200