ಶಿವಮೊಗ್ಗ ಡಿಸಿಸಿ ಬ್ಯಾಂಕ್ನಿಂದ ಮಂಜುನಾಥಗೌಡ ಹೊರಕ್ಕೆ, ಅಧಿಕಾರ ಸ್ವೀಕರಿಸಿದರು ನೂತನ ಅಧ್ಯಕ್ಷರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
108201177 913463652466879 5491250964400112510 o.jpg? nc cat=100& nc sid=110474& nc ohc=4jItTT6 xksAX98rAT8& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಪಾಧ್ಯಕ್ಷರಾದ ಎಂ.ಬಿ.ಚನ್ನವೀರಪ್ಪ ಅವರು ಇನ್ಮುಂದೆ ಡಿಸಿಸಿ ಬ್ಯಾಂಕ್‍ನ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ನಡೆಸಲಿದ್ದಾರೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಉಪಾಧ್ಯಕ್ಷರು ಅಧ್ಯಕ್ಷರಾಗಿದ್ದು ಯಾಕೆ?

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥಗೌಡ ಅವರನ್ನು ನಿರ್ದೇಶಕರ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಹಾಗಾಗಿ ಅವರು ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಬೈಲಾ ಪ್ರಕಾರ ಉಪಾಧ್ಯಕ್ಷರೇ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವವರೆಗೆ ಚನ್ನವೀರಪ್ಪ ಅವರು ಪ್ರಭಾರ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.

109722185 1170475306647221 1373620017109047099 n.jpg? nc cat=100& nc sid=110474& nc ohc=MI268kr7dcMAX8APDvu& nc ht=scontent.fblr11 1

ಅಧ್ಯಕ್ಷ ಸ್ಥಾನದ ಚುನಾವಣೆ ಯಾವಾಗ?

ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನಲ್ಲಿ 18 ನಿರ್ದೇಶಕರ ಸ್ಥಾನಗಳಿವೆ. ಈಗ ಮಂಜುನಾಥಗೌಡ ಅವರ ನಿರ್ದೇಶಕ ಸ್ಥಾನ ಅನರ್ಹಗೊಂಡಿದೆ. ಇದರಿಂದ ಈಗ 17 ನಿರ್ದೇಶಕರು ಮಾತ್ರ ಇದ್ದಾರೆ. ಅಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈಗಾಗಲೇ ಚುನಾವಣಾಧಿಕಾರಿಯಾಗಿ ನಾಗೇಂದ್ರ ಹೊನ್ನಾಳಿ ಅವರನ್ನು ನೇಮಿಸಲಾಗಿದೆ.

ಮಂಜುನಾಥಗೌಡ ನಿರ್ದೇಶಕರ ಸ್ಥಾನ ಅಮಾನತಾಗಿದ್ದೇಕೆ?

ನಕಲಿ ಚಿನ್ನ ಅಡಮಾನ ಸೇರಿದಂತೆ ಡಿಸಿಸಿ ಬ್ಯಾಂಕ್‍ನಲ್ಲಿ ವ್ಯಾಪಕ ಅವ್ಯವಹಾರದ ಹಿನ್ನೆಲೆ ಬೆಂಗಳೂರಿನಿಂದ ಆಗಮಿಸಿದ್ದ ಅಧಿಕಾರಿಗಳ ತಂಡ, ಕಡತಗಳ ಪರಿಶೀಲನೆ ನಡೆಸಿತ್ತು. ಈ ಬೆಳವಣಿಗೆ ಬೆನ್ನಿಗೆ ರಾಜ್ಯ ಸರ್ಕಾರ ಆರ್‍.ಎಂ.ಮಂಜುನಾಥಗೌಡ ಅವರನ್ನು ಬ್ಯಾಂಕ್‍ನ ನಿರ್ದೇಶಕ ಸ್ಥಾನದಿಂದ ಅಮಾನತುಪಡಿಸಿತ್ತು. ಇದರಿಂದ ಸಹಜವಾಗಿಯೇ ಮಂಜುನಾಥಗೌಡ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.

Manjunatha Gowda General Image 1 1

ತನಿಖೆಗೆ ಒತ್ತಾಯಿಸಿದ್ದ ಬಿಜೆಪಿ

ಡಿಸಿಸಿ ಬ್ಯಾಂಕ್‍ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಈ ಸಂಬಂಧ ಮನವಿ ಸಲ್ಲಿಸಿದ್ದರು. ಇದರ ಬೆನ್ನಿಗೆ ಅಧಿಕಾರಿಗಳ ತಂಡ ಡಿಸಿಸಿ ಬ್ಯಾಂಕ್‍ಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿತ್ತು.

https://www.facebook.com/liveshivamogga/videos/648901589055797/?t=1

ಹತ್ತು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ

ಆರ್‍.ಎಂ.ಮಂಜುನಾಥಗೌಡ ಅವರು ಹತ್ತು ಬಾರಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾಗಿದ್ದರು. 1997ರ ಜನವರಿಯಲ್ಲಿ ಮಂಜುನಾಥಗೌಡ ಅವರು ಮೊದಲ ಬಾರಿಗೆ ಅಧ್ಯಕ್ಷರಾದರು. 1999ರ ಏಪ್ರಿಲ್‍ನಲ್ಲಿ ಎರಡನೇ ಬಾರಿಗೆ, 2011ರ ಅಕ್ಟೋಬರ್‍ನಲ್ಲಿ ಮೂರನೇ ಬಾರಿಗೆ ಅಧ್ಯಕ್ಷರಾದರು. ನಂತರ 2015ರಿಂದ ಇತ್ತೀಚಿನವರೆಗೆ ಮಂಜುನಾಥಗೌಡ ಅಧ್ಯಕ್ಷರಾಗಿದ್ದರು.

107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment