ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ ಟಿಪ್ಪು ಜನ್ಮ ದಿನಾಂಕ 20 ನವೆಂಬರ್ 1750 ಎಂದು ವಿಶ್ವಾದ್ಯಂತ ಒಪ್ಪಿಕೊಂಡಿದ್ದಾರೆ. ಆದರೆ ನಿಧಿನ್ ಅವರ ಹೊಸ ಸಂಶೋಧನೆ ಪ್ರಕಾರ ಅದು 1ನೇ ಡಿಸೆಂಬರ್ 1751 ಆಗಿದೆ ಎಂದು ತಿಳಿಸಿದರು.

ಬ್ರಿಟೀಷ್ ಗ್ರಂಥಾಲಯದಲ್ಲಿನ ಪತ್ರಗಳು

ನಿಧಿನ್ ಅವರು ಟಿಪ್ಪು ಜನ್ಮದಿನಾಂಕ ಸಂಬಂಧ ಮೂರು ವರ್ಷಗಳ ಕಾಲ ಸಂಶೋಧನೆ ನಡೆಸಿದ್ದಾರೆ. ಲಂಡನ್‍ನಲ್ಲಿನ ಬ್ರಿಟಿಷ್ ಗ್ರಂಥಾಲಯದಲ್ಲಿ ಟಿಪ್ಪುಗೆ ಸಂಬಂಧಿಸಿದಂತೆ ‘ಫತೇ ಉಲ್ ಮುಜಾಹಿದ್ದೀನ್’ ಎಂಬ ಪರ್ಶಿಯನ್ ಭಾಷೆಯಲ್ಲಿರುವ ಹಸ್ತ ಪ್ರತಿ ಇದೆ. ಇದನ್ನು ಟಿಪ್ಪು ತಾನೇ ಬರೆಸಿದ ಕೈಪಿಡಿಯಾಗಿದೆ. ಅದರಲ್ಲಿ ಜಕ್ರಿಮಾಸದ 14ನೇ ದಿನ 1165 ಇಜ್ರಿ ದಿನದಂದು ಸುರ್ಯೋದಯವಾದ 10 ಗಂಟೆಗಳ ನಂತರ, ನನ್ನ ಜನ್ಮದಿನವನ್ನು ಆಚರಿಸಬೇಕು ಮತ್ತು ಮೈಸೂರು ಸಂಸ್ಥಾನದ ಸಮಸ್ತ ಪ್ರಜೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದಿತ್ತು.

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

ಇದರ ಆಧಾರದ ಮೇಲೆ ದಿನಾಂಕವನ್ನು ಇಂಗ್ಲೀಷ್‍ ಕ್ಯಾಲೆಂಡರ್‍ಗೆ ಬದಲಾಯಿಸಲಾಗಿದೆ. ಅದರಂತೆ ಹೊಸ ದಿನಾಂಕವನ್ನು ಕಂಡು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ಅವರಿಗೆ ಇನ್ನೂ ಕೆಲವು ಹಸ್ತ ಪ್ರತಿಗಳು ಸಿಕ್ಕಿವೆ ಇವೆಲ್ಲವನ್ನೂ ಒಟ್ಟು ಮಾಡಿಕೊಂಡು ಅವರು ಟಿಪ್ಪು ಜನ್ಮ ರಹಸ್ಯವನ್ನು ಬೇಧಿಸಿದ್ದಾರೆ ಎಂದರು.

ಸರ್ಕಾರಕ್ಕೆ ಸಂಶೋಧನೆಯ ವಿವರ

ಇತಿಹಾಸ ತಜ್ಞ ಮತ್ತು ಸಂಶೋಧಕ ನಿಧಿನ್ ಓಲಿಕೆರ ಮಾತನಾಡಿ, ಟಿಪ್ಪು ಜನ್ಮ ದಿನಾಂಕವನ್ನು ನಿಖರವಾಗಿ ತಿಳಿಯಲು ಪ್ರಮುಖವಾಗಿ 3 ದಾಖಲೆಗಳಲ್ಲಿ ಸಂಶೋಧನೆ ಮಾಡಿದ್ದೇನೆ. ಮಂಗಳೂರು ಮತ್ತು ಗೋವಾ ವಿವಿಯ ಮಾಜಿ ಕುಲಪತಿಗಳು ಮತ್ತು ಪ್ರಸಿದ್ಧ ಇತಿಹಾಸಕಾರರಾಗಿರುವ ಪ್ರೋ.ಶೇಖ್‍ಹಾಲಿ ಅವರು ಅವಲೋಕಿಸಿ ಅನುಮೋದೆನೆ ನೀಡಿದ್ದಾರೆ ಎಂದರು.

ಸಂಪೂರ್ಣ ಅಧ್ಯಯನ ವಿವರಗಳನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಟಿಪ್ಪು ಜನ್ಮ ದಿನಾಂಕ 1 ನೇ ಡಿಸೆಂಬರ್ 1751 (1-12-1751) ಆಗಬೇಕೆಂದು ಮನವಿ ಮಾಡಿಕೊಳ್ಳುತ್ತಿರುವೆ ಎಂದರು.

ಇತಿಹಾಸ ತಜ್ಞ ಅಜಯ್ ಶರ್ಮಾ ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment