SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲೆಯಲ್ಲಿ ಸಿದ್ಧತೆಗಳು ಆರಂಭವಾಗಿದೆ. ನಗರದ ವಿವಿಧ ಕ್ಲಬ್ ಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ನಡುವೆ ಪೊಲೀಸ್ ಇಲಾಖೆಯು ಕ್ಲಬ್ ಮಾಲೀಕರು, ಮ್ಯಾನೇಜರ್ ಗಳಿಗೆ 10 ಪಾಯಿಂಟ್ ಸೂಚನೆ ನೀಡಿದೆ. (new year guideline)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಕ್ಲಬ್ ಮಾಲೀಕರಿಗೆ ಸೂಚನೆಗಳನ್ನು ನೀಡಿದ್ದಾರೆ.
new year guideline
ಸೂಚನೆ 1 : ಸರ್ಕಾರದ ಆದೇಶದಂತೆ ಹೊಸ ವರ್ಷಾಚರಣೆ ಮಾಡಬೇಕು. ಬೆಳಗಿನ ಜಾವ 1 ಗಂಟೆಯೊಳಗೆ ಕಾರ್ಯಕ್ರಮ ಮುಗಿಸಬೇಕು.
ಸೂಚನೆ 2 : ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
ಸೂಚನೆ 3 : ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತು ಬಳಸಬಾರದು.

ಸೂಚನೆ 4 : ಮದ್ಯ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ. ರಾತ್ರಿ 11:30 ರ ವರೆಗೆ ಮಾತ್ರ ಮಾರಾಟ ಮಾಡಬೇಕು.
ಸೂಚನೆ 5 : ಮದ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡಬೇಕು.

ಸೂಚನೆ 6 : ಕಾರ್ಯಕ್ರಮಗಳಲ್ಲಿ ನಿಗದಿಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಬಳಕೆ ಮಾಡುವಂತಿಲ್ಲ.
ಸೂಚನೆ 7 : ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ಸೂಚನೆ 8 : ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸಬೇಕು.
ಸೂಚನೆ 9 : ಹೊಸ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು. ಪ್ರತಿಯೊಬ್ಬರಿಗು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ನೋ ಮಾಸ್ಕ್ ನೋ ಎಂಟ್ರಿ ಎಂಬ ಬೋರ್ಡ್ ಎಲ್ಲರಿಗು ಕಾಣುವಂತೆ ಪ್ರದರ್ಶಿಸಬೇಕು.
ಸೂಚನೆ 10 : 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತ.
ಇದನ್ನೂ ಓದಿ – ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್ ಸೇರಿ ಶಿವಮೊಗ್ಗದ 6 ರೈಲುಗಳ ಸಮಯದಲ್ಲಿ ಬದಲಾವಣೆ, ಯಾವೆಲ್ಲ ರೈಲುಗಳು?
ಇನ್ನು, ಯಾವುದೆ ತುರ್ತು ಸಂದರ್ಭ ಹತ್ತಿರದ ಪೊಲೀಸ್ ಠಾಣೆ, ಕಂಟ್ರೋಲ್ ರೂಂಗೆ ಕರೆ ಮಾಡಬೇಕು ಎಂದು ತಿಳಿಸಲಾಗಿದೆ. 9480803300 / 08182-261413 ಅಥವಾ 112ಗೆ ಕರೆ ಮಾಡಬೇಕು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು


CLICK & JOIN – OUR WHATSAPP GROUP



