ಶಿವಮೊಗ್ಗದಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾಯ್ತು ಬಂದ್‌, ನೆಹರು ರಸ್ತೆಯಲ್ಲಿ ಮಾತಿನ ಚಕಮಕಿ

SHIVAMOGGA LIVE NEWS | 29 SEPTEMBER 2023➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ಗೆ (Bandh) ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಪ್ರತಿಭಟನೆ ಹೊರತು ಬಂದ್‌ ಮಾಡಲು ವ್ಯಾಪಾರಿಗಳು ನಿರಾಸಕ್ತಿ ತೋರಿದರು.

ಶಿವಮೊಗ್ಗ ನಗರದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ ಸಂಚಾರ ಎಂದಿನಂತೆ ಇತ್ತು. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೆ ಬದಲಾವಣೆ ಆಗಿರಲಿಲ್ಲ. ವ್ಯಾಪಾರ, ವಹಿವಾಟು ಕೂಡ ಸಹಜವಾಗಿತ್ತು. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ ಜನ ಸಂಖ್ಯೆ ಹೆಚ್ಚಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಇರದ ಹಿನ್ನೆಲೆ ವಿದ್ಯಾರ್ಥಿಗಳು ಕೂಡ ಎಂದಿನಂತೆ ಸಂಚರಿಸಿದರು. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಡೆದವು.

ನಗರದ ಪ್ರಮುಖ ರಸ್ತೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೆರವಣಿಗೆ ನಡೆಸಲಾಯಿತು. ನೆಹರೂ ರಸ್ತೆಯಲ್ಲಿ ಅಂಗಡಿ ಬಂದ್‌ ಮಾಡುವಂತೆ ವರ್ತಕರಿಗೆ ಒತ್ತಾಯಿಸಿದರು. ಆಗ ಕರವೇ ಕಾರ್ಯಕರ್ತರು ಮತ್ತು ಅಂಗಡಿ ಮಾಲೀಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಅಂಗಡಿ ಬಂದ್‌ ಮಾಡುವಂತೆ ಒತ್ತಡ ಹೇರುವಂತಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಸೂಚಿಸಿದರು.

Cauvery Protest in Shimoga city

ಸಾಲು ಸಾಲು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳು, ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಬೆಳಗ್ಗೆ ಕನ್ನಡಪರ ಸಂಘಟನೆಗಳ ಮುಖಂಡರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು. ನಿಲ್ದಾಣದಿಂದ‌ ಬಸ್ಸುಗಳು ಹೊರಗೆ ಹೋಗದಂತೆ ಅಡ್ಡಲಾಗಿ ನಿಂತರು. ಕೂಡಲೆ ಪೊಲೀಸರು ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ

ರಾಜ್ಯ ರೈತ ಸಂಘ ಮತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

Cauvery Protest in Shimoga city

ಕಾವೇರಿ ಕೊಳ್ಳದ ಅಣೆಕಟ್ಟುಗಳಲ್ಲಿ 43 ಟಿಎಂಸಿ ನೀರಿದೆ. ಆ ಭಾಗದ ಕುಡಿಯುವ ನೀರಿಗೆ 36 ಟಿಎಂಸಿ ಅವಶ್ಯಕತೆ ಇದೆ. ನಮ್ಮ ರಾಜ್ಯದ ರೈತರ ಬೆಳೆಗೆ ನೀರು ಸಿಗುವುದಿಲ್ಲ. ಆದರೆ ತಮಿಳುನಾಡು ಸರ್ಕಾರ ಬೇಸಿಗೆ ಬೆಳೆಗೆ ನೀರು ಉಳಿಸಿಕೊಳ್ಳಲು ಕೇಳುತ್ತಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಕಾನೂನು ಬಾಹಿರವಾಗಿದೆ. ರಾಜ್ಯದ ರಾಜಕಾರಣಿಗಳು ನೆಲ, ಜಲದ ವಿಷಯದಲ್ಲಿ ರಾಜಕೀಯ ಮಾಡದೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.ಹೆಚ್‌.ಆರ್.ಬಸವರಾಜಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ

Cauvery Protest in Shimoga city

ವಕೀಲರ ಸಂಘ, ದುರ್ಗಿಗುಡಿ ಕನ್ನಡ ಸಂಘ, ರಾಜ್ಯ ಕನ್‌ಸ್ಟ್ರಕ್ಷನ್‌ ವರ್ಕರ್ಸ್‌ ಅಸೋಸಿಯೇಷನ್‌ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.

Leave a Comment