ಶಿವಮೊಗ್ಗದಲ್ಲಿ ರಸ್ತೆ ಮೇಲೆ ಉಗಿದವರು, ಮಾಸ್ಕ್ ಹಾಕದವರಿಂದ ಒಂದು ಲಕ್ಷಕ್ಕೂ ಹೆಚ್ಚು ದಂಡ ವಸೂಲಿ, ಯಾರಿಗೆಲ್ಲ ದಂಡ ವಿಧಿಸಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020

ಕರೋನ ಹಿನ್ನೆಲೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ ಅಂತಾ ಸರ್ಕಾರ ನಿಯಮ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಸ್ಕ್‌ ಧರಿಸದೆ ಓಡಾಡುವವರ ವಿರುದ್ಧ ಮಹಾನಗರ ಪಾಲಿಕೆ ದಂಡ ವಿಧಿಸುತ್ತಿದೆ. ಮತ್ತೊಂದೆಡೆ ದಂಡ ವಿಧಿಸುವ ಸಂದರ್ಭ ಪಾಲಿಕೆ ಅಧಿಕಾರಿಗಳ ವರ್ತನೆಗೆ ಆಕ್ಷೇಪವು ವ್ಯಕ್ತವಾಗಿದೆ.

ಒಂದು ಲಕ್ಷ ರೂ. ದಂಡ

ಮಾಸ್ಕ್‌ ಕಡ್ಡಾಯಗೊಳಿಸಿದ ಬಳಿಕ ಒಂದೇ ತಿಂಗಳಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಒಂದು ಲಕ್ಷ ರುಪಾಯಿಗೂ ಅಧಿಕ ಮೊತ್ತದ ದಂಡ ವಿಧಿಸಿದ್ದಾರೆ. 1,33,600 ರೂ. ದಂಡದ ಹಣ ಸಂಗ್ರಹ ಮಾಡಲಾಗಿದೆ.

ಉಗುಳಿದ್ದಕ್ಕೆ, ಅಂತರ ಇಲ್ಲದ್ದಕ್ಕೂ ದಂಡ

ಸಾರ್ವಜನಿಕ ಸ್ಥಳದಲ್ಲಿ ಉಗುಳುವುದು, ತಂಬಾಕು ಪದಾರ್ಥ ಜಗಿದು ರಸ್ತೆ ಮೇಲೆ ಉಗುಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದಕ್ಕೂ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಉಗುಳಿದ್ದಕ್ಕೆ ಇಬ್ಬರಿಗೆ ತಲಾ ಸಾವಿರ ರೂ., ತಂಬಾಕು ಪದಾರ್ಥ ಜಗಿದು ರಸ್ತೆ ಮೇಲೆ ಉಗುಳಿದ ಮೂವರಿಗೆ ತಲಾ 1500ರೂ. ದಂಡ ವಿಧಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದಕ್ಕೆ 321 ಮಂದಿಗೆ ದಂಡ ಹಾಕಲಾಗಿದೆ.

Mahanagara Palike Shivamogga 1 1

ಅಧಿಕಾರಿಗಳ ವರ್ತನೆಗೆ ಆಕ್ರೋಶ

ಸಾರ್ವಜನಿಕ ಸ್ಥಳದಲ್ಲಿ ಉಗುಳುವವರ ವಿರುದ್ಧ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿರುವುದು ಜನ ಮೆಚ್ಚುಗೆ ಗಳಿಸಿದೆ. ಈ ಕೆಲಸ ನಿರಂತರವಾಗಿ ಮುಂದುವರೆಯಬೇಕು. ಎಲ್ಲೆಂದರಲ್ಲಿ ಉಗಿಯುವವರಿಗೆ ಇನ್ನಷ್ಟು ಬಿಸಿ ಮುಟ್ಟಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಆದರೆ ಮಾಸ್ಕ್‌ ಧರಿಸದೆ ಇರುವವರ ವಿರುದ್ಧ ದಂಡ ಹಾಕುವ ಸಂದರ್ಭ ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

DC Office 1 1

ಸಿಬ್ಬಂದಿ ವಿರುದ್ಧ‌ ಡಿಸಿಗೆ ದೂರು

ಪಾಲಿಕೆ ಸಿಬ್ಬಂದಿಗಳು ಮಾಸ್ಕ್‌ ಧರಿಸದ ಸಾರ್ವಜನಿಕರಿಂದ ದಂಡ ವಸೂಲಿಯನ್ನಷ್ಟೇ ಮುಖ್ಯವಾಗಿರಿಸಿಕೊಂಡಿದ್ದು, ಕರೋನ ಕುರಿತು ತಿಳಿವಳಿಕೆ ಮೂಡಿಸುತ್ತಿಲ್ಲ. ದಂಡ ಕಟ್ಟಲು ಹಣವಿಲ್ಲ ಎಂದರೆ ಪೊಲೀಸರನ್ನು ಕರೆಯಿಸುತ್ತೇವೆ, ವಾಹನ ಸವಾರರಾಗಿದ್ದರೆ ಟೈಗರ್‌ ವಾಹನ ಕರೆಸುತ್ತೇವೆ ಎಂದು ಬೆದರಿಸಿ, ನಿಂದಿಸುತ್ತಿದ್ದಾರೆ ಎಂದು ಶಿವಮೊಗ್ಗ ಪೀಸ್‌ ಆರ್ಗನೈಸೇಷನ್‌ ಆರೋಪ ಮಾಡಿದೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದೆ.

ಅಧಿಕಾರಿಗಳು 200 ರೂ. ದಂಡ ವಸೂಲಿ ಮಾಡುವುದೆ ಗುರಿ ಅಂದುಕೊಂಡಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಿ, 20 ರೂ. ಒಂದು ಮಾಸ್ಕ್‌ ಕೊಟ್ಟರೆ ಅನುಕೂಲ. ಸುಮ್ಮನೆ ಪೊಲೀಸರಿಗೂ ದಂಡ ಹಾಕಿದ್ದೀವಿ, ತಹಶೀಲ್ದಾರ್‌ಗೂ ದಂಡ ಹಾಕಿದ್ದೇವೆ ಎಂದು ಜನರನ್ನು ಹೆದರಿಸುತ್ತಿದ್ದಾರೆ ಎಂದು ಸಂಘಟನೆ ಮುಖಂಡ ರಿಯಾಜ್‌ ಅಹಮದ್‌ ಆರೋಪಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment