| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗ ನಗರದ ವಿವಿಧೆಡೆ ವಾಹನ ಪಾರ್ಕಿಂಗ್ಗೆ ಅವಕಾಶ ಮತ್ತು ನಿಷೇಧ (No Parking) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ದ್ವಿಚಕ್ರ ವಾಹನಗಳ ನಿಲುಗಡೆ
ಬಿ.ಹೆಚ್.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್ ಪ್ರಾರಂಭದಿಂದ ಕುಚಲಕ್ಕಿ ಕೇರಿ ಎದುರಿನಿಂದ ಕೋಕಿಲಾ ರೇಡಿಯೋ ಅಂಗಡಿಯವರೆಗೆ ಎಡಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್.
ಸಂಗಮ್ ಟೈಲರ್ ಶಾಪ್ನಿಂದ ಡಯಟ್ ಕಾಲೇಜು ಕ್ರಾಸ್ (ಸಾವರ್ಕರ್ ನಗರ ಕ್ರಾಸ್ವರೆಗೆ) ಬಲ ಬದಿಯಲ್ಲಿ ದ್ವಿಚಕ್ರ ವಾಹನಗಳ ಪಾರ್ಕಿಂಗ್
ನಾಲ್ಕು ಚಕ್ರದ ವಾಹನ ಪಾರ್ಕಿಂಗ್ ನಿಷೇಧ
ಅಮೀರ್ ಅಹಮದ್ ಸರ್ಕಲ್ ಸಮೀಪದ ವೆಂಕಟೇಶ್ವರ ಸ್ವೀಟ್ ಹೌಸ್ ಮುಂಭಾಗದಿಂದ ಕರ್ನಾಟಕ ಸಂಘ ಸರ್ಕಲ್ವರೆಗೆ ಎಡ ಮತ್ತು ಬಲ ಬದಿಯಲ್ಲಿ ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ ನಿಷೇಧ.
![]()
ಶಿವಪ್ಪನಾಯಕ ಸರ್ಕಲ್ನಿಂದ ಗಾಂಧಿ ಬಜಾರ್ 2ನೇ ತಿರುವಿನವರೆಗೆ ರಸ್ತೆಯ ಎರಡೂ ಬದಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ನಿಲುಗಡೆ ನಿಷೇಧ.
ನೆಹರು ರಸ್ತೆಯಲ್ಲಿ ಗೋಪಿ ವೃತ್ತದಿಂದ ಅಮೀರ್ ಅಹಮದ್ ಸರ್ಕಲ್ವರೆಗೆ ವಾಹನಗಳ ಪಾರ್ಕಿಂಗ್ ನಿಷೇಧ. ಸ್ಮಾರ್ಟ್ ಸಿಟಿ ವತಿಯಿಂದ ವಾಹನಗಳ ಪಾರ್ಕಿಂಗ್ಗಾಗಿ ಅಭಿವೃದ್ಧಿಪಡಿಸಿರುವ ಕನ್ಸರ್ವೆನ್ಸಿ ಪಾರ್ಕಿಂಗ್ ವ್ಯವಸ್ಥೆ ಜಾರಿಯಾದ ನಂತರ ಈ ನಿಷೇಧ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕಾರುಗಳು ಎಲ್ಲಿ ನಿಲ್ಲಿಸಬೇಕು?
ಆ.1ರಿಂದ ಬಹು ಮಹಡಿ ಪಾರ್ಕಿಂಗ್ ಕಟ್ಟಡ ಕಾರ್ಯಾರಂಭ ಮಾಡಿದೆ. ಇಲ್ಲಿ ಕಾರುಗಳನ್ನು ನಿಲ್ಲಿಸಲು ಸುಸಜ್ಜಿತ ಮತ್ತು ಸುರಕ್ಷಿತ ವ್ಯವಸ್ಥೆ ಇದೆ. ಇನ್ಮುಂದೆ ಕಾರುಗಳನ್ನು ಇದೇ ಬಹುಮಹಡಿ ಕಟ್ಟಡದಲ್ಲಿ ಪಾರ್ಕಿಂಗ್ ಮಾಡಬೇಕು. ಇದರಿಂದ ಬಿ.ಹೆಚ್.ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ.
ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ
No Parking
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()